ಯುಎಇ ಸೇನೆ 
ದೇಶ

ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಯುಎಇ ಸೇನೆಯಿಂದ ಪಥಸಂಚಲನ

ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ 68ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬಂದಿದ್ದು ಇದರ ಜತೆಗೆ ಮೊಟ್ಟ ಮೊದಲ ಬಾರಿಗೆ...

ನವದೆಹಲಿ: ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ 68ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬಂದಿದ್ದು ಇದರ ಜತೆಗೆ ಮೊಟ್ಟ ಮೊದಲ ಬಾರಿಗೆ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಯುಎಇ ಸೇನೆ ಸಹ ಭಾಗವಹಿಸಿತ್ತು. 
ಯುಎಇ ಸೇನೆಯಿಂದ ಒಟ್ಟು 149 ಯೋಧರು ಲೆಫ್ಟಿನೆಂಟ್ ಕರ್ನಲ್ ಅಬೋದ್ ಮುಸಾಬೇ ಅಲ್ಫಾಫೆಲಿ ನೇತೃತ್ವದಲ್ಲಿ ಪಥ ಸಂಚಲನ ನಡೆಸಿದರು. ಜತೆಗೆ ಯುಎಇ ಬ್ಯಾಂಡ್ ನಲ್ಲಿ 35 ಮಂದಿ ಸಂಗೀತಗಾರರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಯುಎಇ ಸೇನೆಯಿಂದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗೌರವ ವಂದನೆ ಸ್ವೀಕರಿಸಿದರು. 
ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಫ್ರಾನ್ಸ್ ಬಳಿಕ ಪಥ ಸಂಚಲನ ನಡೆಸಿದ ಎರಡನೇ ರಾಷ್ಟ್ಪವಾಗಿದೆ. ಯುಎಇ ಜತೆಗೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್ಜಿ) ಎಲ್ಲರಿಗೂ ಬ್ಲಾಕ್ ಕಮಾಂಡೋ ಹೆಸರಿನಿಂದ ಪರಿಚಿತರಾಗಿರುವ ಈ ಪಡೆ ಸಹ ಇದೇ ಮೊದಲ ಬಾರಿಗೆ ಪಥ ಸಂಚಲನ ನಡೆಸಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿಯಿಂದ 24 ಗಂಟೆ ಅಂತಿಮ ಗಡುವು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಶಬರಿಮಲೆ ಚಿನ್ನ ಕಳವು ಪ್ರಕರಣ: EDಯಿಂದ 1.3 ಕೋಟಿ ರೂ. ಆಸ್ತಿ ಮುಟ್ಟುಗೋಲು, ಚಿನ್ನದ ಗಟ್ಟಿ ವಶಕ್ಕೆ!

SCROLL FOR NEXT