ಯುಎಇ ಸೇನೆ 
ದೇಶ

ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಯುಎಇ ಸೇನೆಯಿಂದ ಪಥಸಂಚಲನ

ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ 68ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬಂದಿದ್ದು ಇದರ ಜತೆಗೆ ಮೊಟ್ಟ ಮೊದಲ ಬಾರಿಗೆ...

ನವದೆಹಲಿ: ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ 68ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬಂದಿದ್ದು ಇದರ ಜತೆಗೆ ಮೊಟ್ಟ ಮೊದಲ ಬಾರಿಗೆ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಯುಎಇ ಸೇನೆ ಸಹ ಭಾಗವಹಿಸಿತ್ತು. 
ಯುಎಇ ಸೇನೆಯಿಂದ ಒಟ್ಟು 149 ಯೋಧರು ಲೆಫ್ಟಿನೆಂಟ್ ಕರ್ನಲ್ ಅಬೋದ್ ಮುಸಾಬೇ ಅಲ್ಫಾಫೆಲಿ ನೇತೃತ್ವದಲ್ಲಿ ಪಥ ಸಂಚಲನ ನಡೆಸಿದರು. ಜತೆಗೆ ಯುಎಇ ಬ್ಯಾಂಡ್ ನಲ್ಲಿ 35 ಮಂದಿ ಸಂಗೀತಗಾರರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಯುಎಇ ಸೇನೆಯಿಂದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗೌರವ ವಂದನೆ ಸ್ವೀಕರಿಸಿದರು. 
ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಫ್ರಾನ್ಸ್ ಬಳಿಕ ಪಥ ಸಂಚಲನ ನಡೆಸಿದ ಎರಡನೇ ರಾಷ್ಟ್ಪವಾಗಿದೆ. ಯುಎಇ ಜತೆಗೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್ಜಿ) ಎಲ್ಲರಿಗೂ ಬ್ಲಾಕ್ ಕಮಾಂಡೋ ಹೆಸರಿನಿಂದ ಪರಿಚಿತರಾಗಿರುವ ಈ ಪಡೆ ಸಹ ಇದೇ ಮೊದಲ ಬಾರಿಗೆ ಪಥ ಸಂಚಲನ ನಡೆಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!