ದೇಶ

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ವಿಶಾಖಪಟ್ಟಣದಲ್ಲಿ ಪ್ರತಿಭಟನೆ: 300 ಯುವಕರ ಬಂಧನ

Srinivas Rao BV
ವಿಶಾಖಪಟ್ಟಣ: ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ 68 ನೇ ಗಣರಾಜ್ಯೋತ್ಸವ ದಿನದಂದು ವಿಶಾಖಪಟ್ಟಣದಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. 
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ ವಿಶಾಖಪಟ್ಟಣದ ವಿವಿಧೆಡೆ 300 ಯುವಕರನ್ನು ಬಂಧಿಸಲಾಗಿದೆ. ಪ್ರತಿಭಟನೆಗೆ ಅಡ್ಡಿ ಪಡಿಸಿದ ಪೊಲೀಸರ ಕ್ರಮವನ್ನು ವಿರೋಧಿಸಿ ಪ್ರತಿಭಟನಾ ನಿರತ ಯುವಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪರಿಣಾಮವಾಗಿ ಪೊಲೀಸರು ಲಾಠಿ ಪ್ರಹಾರ ಮಾಡಿರುವ ಘಟನೆಯೂ ನಡೆದೆ. 
ವಿದ್ಯಾರ್ಥಿಗಳಷ್ಟೇ ಅಲ್ಲದೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಹಲವು ರಾಜಕೀಯ ನಾಯಕರನ್ನೂ ಸಹ ಬಂಧಿಸಲಾಗಿದೆ. 
SCROLL FOR NEXT