ಅಮರಿಂದರ್ ಸಿಂಗ್ 
ದೇಶ

ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅಕಾಲಿ ದಳಕ್ಕೆ ಮತ ಹಾಕಿದಂತೆಯೇ: ಅಮರಿಂದರ್ ಸಿಂಗ್

ಪಂಜಾಬ್ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅದು ಶಿರೋಮಣಿ ಅಕಾಲಿ ದಳಕ್ಕೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಚಂಡೀಗಢ: ಪಂಜಾಬ್ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅದು ಶಿರೋಮಣಿ ಅಕಾಲಿ ದಳಕ್ಕೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಮರಿಂದರ್ ಸಿಂಗ್ ಹೇಳಿದ್ದಾರೆ. 
ಆಮ್ ಆದ್ಮಿ ಪಕ್ಷ ಹಾಗೂ ಶಿರೋಮಣಿ ಅಕಾಲಿದಳ ಪಕ್ಷಗಳನ್ನು ಮೂಲಭೂತವಾದಿ ಸಿದ್ಧಾಂತಗಳನ್ನು ಹೊಂದಿರುವ ಪಕ್ಷಗಳೆಂದು ಹೇಳಿರುವ ಅಮರಿಂದರ್ ಸಿಂಗ್, ಎಚ್ಚರಿಕೆಯಿಂದ ಮತ ಚಲಾವಣೆ ಮಾಡುವಂತೆ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.  ಅಕಾಲಿದಳದವರು 10 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಲೂಟಿ ಮಾಡುತ್ತಿದ್ದರೆ ಆಮ್ ಆದ್ಮಿ ಪಕ್ಷ ಪಂಜಾಬಿಯತ್ ನ್ನು ಹಾಳು ಮಾಡಲು ಹೊರಗಿನಿಂದ ಜನರನ್ನು ಕರೆಸಿದೆ ಎಂದು ಸಾರ್ವಜನಿಕ ಸಭೆಯಲ್ಲಿ ಆರೋಪಿಸಿದ್ದಾರೆ. 
ಅಕಾಲಿ ದಳದ ಆಡಳಿತದಲ್ಲಿ ಜನತೆ ಸಾಕಷ್ಟು ನೊಂದಿದ್ದಾರೆ. ಪಂಜಾಬ್ ನ್ನು ಲೂಟಿ ಮಾಡಿರುವ ಪ್ರಕಾಶ್ ಸಿಂಗ್ ಬಾದಲ್ ಕ್ಷೇತ್ರದಿಂದಲೇ ಸ್ಪರ್ಧಿಸಿ ಪಾಠ ಕಲಿಸಲಿದ್ದೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT