ಜಮ್ಮುವಿನಲ್ಲಿ ದಟ್ಟವಾಗಿ ಆವರಿಸಿದ ಹಿಮ(ಒಳ ಚಿತ್ರದಲ್ಲಿ ಹುತಾತ್ಮ ಯೋಧ ಸಂದೀಪ್ ಶೆಟ್ಟಿ) 
ದೇಶ

ಜಮ್ಮು: ಹಿಮಪಾತದಲ್ಲಿ ಸಿಲುಕಿದ್ದ ಕರ್ನಾಟಕದ ಸಂದೀಪ್ ಸೇರಿದಂತೆ 14 ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗುರೆಜ್ ವಲಯದಲ್ಲಿ ಸೇನಾ ಶಿಬಿರದ ಮೇಲೆ ಹಿಮಕುಸಿತದಿಂದಾಗಿ...

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗುರೆಜ್ ವಲಯದಲ್ಲಿ ಸೇನಾ ಶಿಬಿರದ ಮೇಲೆ ಹಿಮಕುಸಿತದಿಂದಾಗಿ ಹುತಾತ್ಮರಾದ ಯೋಧರ ಪೈಕಿ ಶಾಂತಿಗ್ರಾಮ ಹೋಬಳಿಯ ದೇವಿಹಳ್ಳಿಯ ವೀರ ಯೋಧ ಸಂದೀಪ್ ಶೆಟ್ಟಿ ಸೇರಿದ್ದಾರೆ. ಈ ಮೂಲಕ ಹುತಾತ್ಮ ಯೋಧರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.
ಸಂದೀಪ್ ಅವರಿಗೆ 2 ತಿಂಗಳ ಹಿಂದಷ್ಟೇ ಮದುವೆ ನಿಶ್ಚಿತಾರ್ಥವಾಗಿತ್ತು. ಮೊನ್ನೆ 25ರಂದು ಹಿಮಪಾತವಾಗುವುದಕ್ಕೆ ಕೆಲ ದಿನಗಳ ಹಿಂದೆ ಮನೆಯವರಿಗೆ ಕರೆ ಮಾಡಿ ಅಲ್ಲಿನ ದಟ್ಟ ಹಿಮ ಆವರಿಸಿದ ಬಗ್ಗೆ ತಿಳಿಸಿದ್ದರು. ಅವರ ಮದುವೆ ಫೆ.22 ರಂದು ನಡೆಯಬೇಕಿತ್ತು. ಇದೀಗ ಅವರ ವೀರ ಮರಣದಿಂದಾಗಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಅವರು 7-8 ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರಿದ್ದರು.
ಸಂದೀಪ್ ಹುತಾತ್ಮರಾದ ಬಗ್ಗೆ ಜಿಲ್ಲಾಡಳಿತಕ್ಕೆ ಇದುವರೆಗೆ ಮಾಹಿತಿ ಬಂದಿಲ್ಲ. ಗ್ರಾಮಸ್ಥರಿಂದ ವಿಷಯ ತಿಳಿದಿದೆ.
ಇನ್ನೊಬ್ಬ ಯೋಧ ಬೆಳಗಾವಿಯ ಶ್ರೀಹರಿ ಕೂಗಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಅಲ್ಲಿ ರಕ್ಷಣಾ ಕಾರ್ಯ ಅಂತ್ಯಗೊಂಡಿದೆ.
ನಿನ್ನೆ ಗುರೆಜ್ ವಲಯದ ಗಡಿ ನಿಯಂತ್ರಣ ರೇಖೆ ಬಳಿ 10 ಮಂದಿ ಸೈನಿಕರ ಮೃತದೇಹಗಳು ಸಿಕ್ಕಿ 4 ಮಂದಿ ಕಣ್ಮರೆಯಾಗಿದ್ದರು. ಇಂದು ಆ 4 ಮಂದಿ ಯೋಧರ ಶವ ಪತ್ತೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಸಮರ ತೀವ್ರ: 11ನೇ ದಿನವೂ ಅಮೆರಿಕದಿಂದ ಭೀಕರ ವಾಯುದಾಳಿ; ವಿಫಲವಾದ ಕದನ ವಿರಾಮ ಒಪ್ಪಂದ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ

ವಿದ್ಯಾರ್ಥಿಗಳಿಗೆ ಗೊಂದಲವಲ್ಲ, ಭರವಸೆ ಬೇಕು; ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು 'ರಾಜಕೀಯ ದಾಳ'ವಾಗಿ ಬಳಸುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!

ದೆಹಲಿ ಪೊಲೀಸರಿಂದ ಪ್ರಿಯಾಂಕ ವಾಧ್ರ, ಕಾಂಗ್ರೆಸ್ ನಾಯಕರು ವಶಕ್ಕೆ; ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ

CJP Protest: ಸೋನಂ ವಾಂಗ್ಚುಕ್‌ಗೆ ಹೈಕೋರ್ಟ್ ಬಿಗ್ ರಿಲೀಫ್: ಸಫ್ದರ್‌ಜಂಗ್‌ನಿಂದ ಮೆದಾಂತ ಆಸ್ಪತ್ರೆಗೆ ಸ್ಥಳಾಂತರ