ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಹಾಗೂ ವೀರಪ್ಪನ್ 
ದೇಶ

ನರಹಂತಕ ಕಾಡುಗಳ್ಳ ವೀರಪ್ಪನ್ ಬದುಕಿನ ಕುರಿತು ಪುಸ್ತಕ ಬರೆದ "ವಿಜಯ್ ಕುಮಾರ್"

ದಶಕಗಳ ಕಾಲ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ದೊಡ್ಡ ತಲೆನೋವಾಗಿ ಕಾಡಿದ್ದ ನರಹಂತಕ ಕಾಡುಗಳ್ಳ ವೀರಪ್ಪನ್ ನನ್ನು ಹತ್ಯೆಗೈದ ಪೊಲೀಸ್ ತಂಡದ ನೇತೃತ್ವ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ ವಿಜಯ್ ಕುಮಾರ್ ಅವರು, ವೀರಪ್ಪನ್ ಜೀವನಾಧಾರಿತ ಕುರಿತ ಪುಸ್ತಕ ಬರೆದಿದ್ದಾರೆ.

ನವದೆಹಲಿ: ದಶಕಗಳ ಕಾಲ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ದೊಡ್ಡ ತಲೆನೋವಾಗಿ ಕಾಡಿದ್ದ ನರಹಂತಕ ಕಾಡುಗಳ್ಳ ವೀರಪ್ಪನ್ ನನ್ನು ಹತ್ಯೆಗೈದ ಪೊಲೀಸ್ ತಂಡದ ನೇತೃತ್ವ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ ವಿಜಯ್ ಕುಮಾರ್ ಅವರು, ವೀರಪ್ಪನ್ ಜೀವನಾಧಾರಿತ ಕುರಿತ ಪುಸ್ತಕ ಬರೆದಿದ್ದಾರೆ.

ವಿಜಯ್ ಕುಮಾರ್ ಅವರು, ವೀರಪ್ಪನ್‌ ಸೆರೆಗೆ ಕಾರ್ಯತಂತ್ರ ರೂಪಿಸಿದ್ದ ಕಾರ್ಯಾಚರಣೆಯಲ್ಲಿ ಮುಂಚೂಣಿಯಲ್ಲಿದ್ದ ತಮಿಳುನಾಡು ವಿಶೇಷ ಕಾರ್ಯಾ ಚರಣಾ ಪಡೆ (ಎಸ್‌ಟಿಎಫ್‌)ಯ ಅಧಿಕಾರಿಯಾಗಿದ್ದರು. "ವೀರಪ್ಪನ್‌: ಚೇಸಿಂಗ್‌  ದ ಬ್ರಿಗ್ಯಾಂಡ್‌" ಎಂಬ ಪುಸ್ತಕವನ್ನು ವಿಜಯ್ ಕುಮಾರ್ ಅವರು ಬರೆದಿದ್ದು, ಪುಸ್ತಕದಲ್ಲಿ ಖ್ಯಾತ ನಟ ರಾಜ್‌ ಕುಮಾರ್‌ರನ್ನು 108ದಿನಗಳ ಕಾಲ ಅಪಹರಿಸಿದ್ದ ದರೋಡೆಕೋರನ ವ್ಯಕ್ತಿತ್ವ, ಪ್ರಖ್ಯಾತ ವ್ಯಕ್ತಿ​ಗಳನ್ನು ಅಪಹರಿಸಿ  ನಿರ್ದಯವಾಗಿ ಹತ್ಯೆಗೈ​ಯುತ್ತಿದ್ದ ನೈಜ ಘಟನೆಗಳನ್ನು ಪುಸ್ತಕದಲ್ಲಿ ವಿವರಿಸಿದ್ದಾರೆ.

ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು ಮೂರು ರಾಜ್ಯಗಳಿಗೂ 20 ವರ್ಷಗಳ ಕಾಲ ಭೀತಿ ಹುಟ್ಟಿಸಿದ್ದ ವೀರಪ್ಪನ್‌. ಸುಮಾರು 200ಕ್ಕೂ ಹೆಚ್ಚು ಆನೆಗಳನ್ನು ಕೊಂದು, ನೂರಾರು ಕೋಟಿ ಬೆಲೆಬಾಳುವ ಶ್ರೀಗಂಧವನ್ನು  ರಾಜಾರೋಷವಾಗಿ ಕಳ್ಳಸಾಗಣೆ ಮಾಡಿದ್ದ. ಅಲ್ಲದೆ ತನ್ನ ವಿರುದ್ಧ ಕೆಲಸ ಮಾಡಿದ, ಸಾಕ್ಷಿ ಹೇಳಿದ ಮತ್ತು ಅನುಮಾನದ ಮೇಲೆ ಸುಮಾರು 180 ಮಂದಿಯನ್ನು ವೀರಪ್ಪನ್ ಹತ್ಯೆಗೈದಿದ್ದ. 1952ರಲ್ಲಿ ತಮಿಳುನಾಡಿನ  ಗೋಪಿನಾಥಂನಲ್ಲಿ ಹುಟ್ಟಿದ್ದ ವೀರಪ್ಪನ್ ಬಳಿ ಕಾಡುಗಳ್ಳ ದಂತಚೋರ ಮತ್ತು ನರಂಹತಕನಾಗಿ ಬೆಳೆದು ಬಳಿಕ 2004ರಲ್ಲಿ ಹೇಗೆ ಅಂತ್ಯಕಂಡ ಎಂಬ ವಿಚಾರದ ಕುರಿತು ಸವಿಸ್ತಾರವಾಗಿ ವಿಜಯ್ ಕುಮಾರ್ ಅವರು ತಮ್ಮ "ವೀರಪ್ಪನ್‌: ಚೇಸಿಂಗ್‌ ದ ಬ್ರಿಗ್ಯಾಂಡ್‌" ಪುಸ್ತಕದಲ್ಲಿ ವಿವರಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT