ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದ ಮಚ್ಚಿಲ್ ನಲ್ಲಿ ಹಿಮಪಾತದಲ್ಲಿ ಸಿಲುಕಿದ್ದ ಐವರು ಯೋಧರ ರಕ್ಷಣೆ

ಸೇನೆ ಹಿಮಪಾತ ರಕ್ಷಣಾ ತಂಡ ಮಂಜುಗಡ್ಡೆ ಅಡಿಯಲ್ಲಿ ಸಿಲುಕಿದ್ದ ಐವರು ಯೋಧರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

ಶ್ರೀನಗರ: ಸೇನೆ ಹಿಮಪಾತ ರಕ್ಷಣಾ ತಂಡ ಮಂಜುಗಡ್ಡೆ ಅಡಿಯಲ್ಲಿ ಸಿಲುಕಿದ್ದ ಐವರು ಯೋಧರನ್ನು ರಕ್ಷಿಸಿದೆ.
ಜಮ್ಮು ಕಾಶ್ಮೀರದ  ಗಡಿ ನಿಯಂತ್ರಣ ರೇಖೆಯ ಮಚ್ಚಿಲ್ ಪ್ರದೇಶದಲ್ಲಿ ಸೇನಾ ಶಿಬಿರದ ಮೇಲೆ ಭಾರಿ ಪ್ರಮಾಣದ ಹಿಮಪಾತವಾಗಿದ್ದರಿಂದ ಆವರು ಸೈನಿಕರು ಮಂಜುಗಡ್ಡೆಯೊಳಗೆ ಸಿಲುಕಿದ್ದರು ಎಂದು ರಕ್ಷಣಾ ಇಲಾಖೆ ವಕ್ತಾರ ಕಲೋನಿಯಲ್ ರಾಜೇಶ್ ಕಾಲಿಯಾ ಹೇಳಿದ್ದಾರೆ.
ಐವರು ಯೋಧರು ಹಿಮದೊಳಗೆ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ಆರಂಭಿಸಿದ ಸೇನೆಯ ರಕ್ಷಣಾ  ತಂಡ,  ವಿಶೇಷ ಉಪಕರಣಗಳನ್ನು ಬಳಸಿ ಅಹಿತಕರ ವಾಕತಾವರಣ ಹಾಗೂ ಪದೇ ಪದೇ ಉಂಟಾಗುತ್ತಿದ್ದ ಹಿಮಪಾತದ ನಡುವೆಯೂ ಮಂಜುಗಡ್ಡೆ ಅಡಿ ಸಿಲುಕಿದ್ದ ಸೈನಿಕರನ್ನು ಯಶಸ್ವಿಯಾಗಿ ರಕ್ಷಿಸಿದೆ ಎಂದು ಅವರು ತಿಳಿಸಿದ್ದಾರೆ.
ರಕ್ಷಿಸಲ್ಪಟ್ಟ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ ನಡೆದ ನಾಲ್ಕನೇ ಘಟನೆ ಇದಾಗಿದೆ. ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಹಿಮಪಾತವಾಗುತ್ತಿದೆ ಎಂದು ಹೇಳಲಾಗಿದೆ.
ಭಾರಿ ಪ್ರಮಾಣದಲ್ಲಿ ಹಿಮಪಾತವಾಗುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಕಡಿತಗೊಂಡಿದೆ. ಹಲವು ವಿಮಾನಗಳ ಪ್ರಯಾಣ ಕೂಡ ರದ್ದುಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT