ಸಂಗ್ರಹ ಚಿತ್ರ 
ದೇಶ

ಜಾಟ್ ಪ್ರತಿಭಟನೆ; ಹರಿಯಾಣದಲ್ಲಿ ಹೆಚ್ಚಿದ ಪ್ರತಿಭಟನೆ

ಮೀಸಲಾತಿ ಆಗ್ರಹಿಸಿ ಭಾನುವಾರ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಹರಿಯಾಣ ರಾಜ್ಯದೆಲ್ಲಡೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ...

ನವದೆಹಲಿ: ಮೀಸಲಾತಿ ಆಗ್ರಹಿಸಿ ಭಾನುವಾರ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಹರಿಯಾಣ ರಾಜ್ಯದೆಲ್ಲಡೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮೀಸಲಾತಿಗೆ ಆಗ್ರಹಿಸಿ ಹರಿಯಾಣ ರಾಜ್ಯದ 19 ಜಿಲ್ಲೆಗಳಲ್ಲಿ ಜಾಟ್ ಸಮುದಾಯ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಹರಿಯಾಣ ಸರ್ಕಾರ ಹಲವೆಡೆ ಸೆಕ್ಷನ್ 144 ಜಾರಿ ಮಾಡಿತ್ತು. ಈ ನಿಷೇಧಾಜ್ಞೆ ಇಂದೂ ಕೂಡ ಮುಂದುವರೆಯಲಿದ್ದು,  5 ಅಥವಾ ಅದಕ್ಕೂ ಹೆಚ್ಚು ಮಂದಿ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಿಂದ 500 ಮೀಟರ್ ಗಳವರೆಗೆ ಗುಂಪಾಗಿ ಹೋಗುವಂತಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ವರ್ಷ ನಡೆದಿದ್ದ ಜಾಟ್ ಸಮುದಾಯದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದಲ್ಲಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದರು.ರೊಹ್ತಕ್, ಸೋನಿಪತ್ ಮತ್ತು ಝಜ್ಜರ್ ಸೇರಿದಂತೆ ಹಲವಾರು ಜಿಲ್ಲೆಗಳ ಮೇಲೆ ಪ್ರತಿಭಟನೆಯ ಬಿಸಿ ತೀವ್ರವಾಗಿ ತಟ್ಟಿತ್ತು. ಇದಲ್ಲದೇ ರಾಜಧಾನಿ ದೆಹಲಿ ಕೂಡ ಪ್ರತಿಭಟನೆಯಿಂದ ತತ್ತರಿಸಿ ಹೋಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT