ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದಲ್ಲಿ ಹಿಮಪಾತ: 2 ದಿನಗಳ ಹಿಂದೆ ರಕ್ಷಿಸಲಾಗಿದ್ದ ಐವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಮಚಿಲ್ ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಐವರು ಯೋಧರನ್ನು ರಕ್ಷಿಸಲಾಗಿತ್ತು....

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಐವರು ಯೋಧರನ್ನು ರಕ್ಷಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಐವರು ಸೋಮವಾರ ಹುತಾತ್ಮರಾಗಿದ್ದಾರೆ.
ಜನವರಿ 28ರಂದು ಉತ್ತರ ಕಾಶ್ಮೀರದ ಮಚಿಲ್ ನಲ್ಲಿ ಐವರು ಯೋಧರು ಹಿಮದೊಳಗೆ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ಆರಂಭಿಸಿದ ಸೇನೆಯ ರಕ್ಷಣಾ  ತಂಡ, ವಿಶೇಷ ಉಪಕರಣಗಳನ್ನು ಬಳಸಿ ಅಹಿತಕರ ವಾಕತಾವರಣ ಹಾಗೂ ಪದೇ ಪದೇ ಉಂಟಾಗುತ್ತಿದ್ದ ಹಿಮಪಾತದ ನಡುವೆಯೂ ಮಂಜುಗಡ್ಡೆ ಅಡಿ ಸಿಲುಕಿದ್ದ ಸೈನಿಕರನ್ನು ಯಶಸ್ವಿಯಾಗಿ ರಕ್ಷಿಸಿದ್ದರು. 
ಗಂಭೀರವಾಗಿ ಗಾಯಗೊಂಡಿದ್ದ ಐವರು ಯೋಧರನ್ನು ಇಂದು ಶ್ರೀನಗರದ ಸೇನಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಎಲ್ಲಾ ಐದು ಯೋಧರಿಗೂ ಲಘು ಉಷ್ಣತೆಯ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
ಕಳೆದ ಎರಡು ವಾರಗಳಿಂದ ಜಮ್ಮು ಮತ್ತು ಕಾಶ್ಮೀರದ ಹವಮಾನದಲ್ಲಿ ಭಾರಿ ಏರುಪೇರಾಗುತ್ತಿದ್ದು, ಭಾರಿ ಪ್ರಮಾಣದ ಹಿಮಪಾತವಾಗುತ್ತಿದೆ. ತಾಪಮಾನ ಕುಸಿತ ಹಾಗೂ ಹಿಮಪಾತಗಳಿಂದಾಗಿ ಗಡಿಯಲ್ಲಿ ಸೈನಿಕರು ಕರ್ತವ್ಯ  ನಿರ್ವಹಿಸುವುದೇ ದುಸ್ತರವಾಗಿ ಪರಿಣಮಿಸಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ ಪರಿಣಾಮ ಇದವರೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 21 ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT