ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದಲ್ಲಿ ಹಿಮಪಾತ: 2 ದಿನಗಳ ಹಿಂದೆ ರಕ್ಷಿಸಲಾಗಿದ್ದ ಐವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಮಚಿಲ್ ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಐವರು ಯೋಧರನ್ನು ರಕ್ಷಿಸಲಾಗಿತ್ತು....

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಐವರು ಯೋಧರನ್ನು ರಕ್ಷಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಐವರು ಸೋಮವಾರ ಹುತಾತ್ಮರಾಗಿದ್ದಾರೆ.
ಜನವರಿ 28ರಂದು ಉತ್ತರ ಕಾಶ್ಮೀರದ ಮಚಿಲ್ ನಲ್ಲಿ ಐವರು ಯೋಧರು ಹಿಮದೊಳಗೆ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ಆರಂಭಿಸಿದ ಸೇನೆಯ ರಕ್ಷಣಾ  ತಂಡ, ವಿಶೇಷ ಉಪಕರಣಗಳನ್ನು ಬಳಸಿ ಅಹಿತಕರ ವಾಕತಾವರಣ ಹಾಗೂ ಪದೇ ಪದೇ ಉಂಟಾಗುತ್ತಿದ್ದ ಹಿಮಪಾತದ ನಡುವೆಯೂ ಮಂಜುಗಡ್ಡೆ ಅಡಿ ಸಿಲುಕಿದ್ದ ಸೈನಿಕರನ್ನು ಯಶಸ್ವಿಯಾಗಿ ರಕ್ಷಿಸಿದ್ದರು. 
ಗಂಭೀರವಾಗಿ ಗಾಯಗೊಂಡಿದ್ದ ಐವರು ಯೋಧರನ್ನು ಇಂದು ಶ್ರೀನಗರದ ಸೇನಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಎಲ್ಲಾ ಐದು ಯೋಧರಿಗೂ ಲಘು ಉಷ್ಣತೆಯ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
ಕಳೆದ ಎರಡು ವಾರಗಳಿಂದ ಜಮ್ಮು ಮತ್ತು ಕಾಶ್ಮೀರದ ಹವಮಾನದಲ್ಲಿ ಭಾರಿ ಏರುಪೇರಾಗುತ್ತಿದ್ದು, ಭಾರಿ ಪ್ರಮಾಣದ ಹಿಮಪಾತವಾಗುತ್ತಿದೆ. ತಾಪಮಾನ ಕುಸಿತ ಹಾಗೂ ಹಿಮಪಾತಗಳಿಂದಾಗಿ ಗಡಿಯಲ್ಲಿ ಸೈನಿಕರು ಕರ್ತವ್ಯ  ನಿರ್ವಹಿಸುವುದೇ ದುಸ್ತರವಾಗಿ ಪರಿಣಮಿಸಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ ಪರಿಣಾಮ ಇದವರೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 21 ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT