ಅರವಿಂದ್ ಕೇಜ್ರಿವಾಲ್ 
ದೇಶ

ಪಂಜಾಬ್ ಚುನಾವಣೆ: ಮಾಜಿ ಉಗ್ರನ ಮನೆಯಲ್ಲಿ ಕೇಜ್ರಿವಾಲ್ ವಾಸ್ತವ್ಯ, ಕೇಜ್ರಿ ವಿರುದ್ಧ ವಾಗ್ದಾಳಿ

ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದೀಗ ಪಂಜಾಬ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು...

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದೀಗ ಪಂಜಾಬ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು ಕಳೆದ ರಾತ್ರಿ ಮಾಜಿ ಉಗ್ರನ ಮನೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ತೀವ್ರ ಚರ್ಚೆಗೆ ಗ್ರಾಸವಾಗಿದ್ದಾರೆ. 
ಫೆಬ್ರವರಿ 4 ರಂದು ಪಂಜಾಬ್ ವಿಧಾನಸಭೆ ಚುನಾವಣಾ ಮತದಾನ ನಡೆಯಲಿದ್ದು ಕೆಲ ದಿನಗಳಿಂದ ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಶನಿವಾರ ಝೀರಾ ಎಂಬಲ್ಲಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಕೇಜ್ರಿವಾಲ್ ರಾತ್ರಿ ಮೋಗಾದಲ್ಲಿರುವ ಖಲಿಸ್ತಾನ ಕಮಾಂಡೋ ಫೋರ್ಸ್ ನ ಮಾಜಿ ಉಗ್ರ ಗುರಿಂದರ್ ಸಿಂಗ್ ಅವರ ಮನೆಯಲ್ಲಿ ಗುಟ್ಟಾಗಿ ವಾಸ್ತವ್ಯ ಹೂಡಿದ್ದರು.
ಆಮ್ ಆದ್ಮಿ ಪಕ್ಷ ಮೂಲಭೂತವಾದಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ಮತ್ತು ಅಕಾಲಿದಳದ ಮುಖಂಡರು ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. 
ಪಂಜಾಬ್ ನಲ್ಲಿ ಅಧಿಕಾರಕ್ಕೇರುವ ಸಲುವಾಗಿ ಕೇಜ್ರಿವಾಲ್ ಮೂಲಭೂತವಾದಿಗಳೊಂದಿಗೆ ಕೈಜೋಡಿಸುತ್ತಿದ್ದಾರೆ. ರಾಜ್ಯದ ಶಾಂತಿ ಸೌಹಾರ್ದತೆಗೆ ಭಂಗ ತರಲು ಕೇಜ್ರಿವಾಲ್ ಯತ್ನಿಸುತ್ತಿದ್ದಾರೆ ಎಂದು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT