ಅಮಿತ್ ಶಾ 
ದೇಶ

ಉ.ಪ್ರ ಚುನಾವಣೆ ಫಲಿತಾಂಶವನ್ನು ನೋಟು ಅಮಾನ್ಯಕ್ಕೆ ಜನಮತವನ್ನಾಗಿ ಪರಿಗಣಿಸಲು ಸಿದ್ಧ: ಶಾ

ಬಿಜೆಪಿ ಪ್ರತಿಪಕ್ಷಗಳ ಸವಾಲಿಗೆ ಸಿದ್ಧವಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶ ನೋಟು ಅಮಾನ್ಯದ ನಿರ್ಧಾರಕ್ಕೆ ಜನಮತವಾಗಲು ಸಾಧ್ಯವಿಲ್ಲವಾದರೂ, ಪ್ರತಿಪಕ್ಷಗಳು ಅದನ್ನೇ ಪ್ರಧಾನವಾಗಿ ಪರಿಗಣಿಸುವುದಾದರೆ ಬಿಜೆಪಿ ಪ್ರತಿಪಕ್ಷಗಳ ಸವಾಲಿಗೆ ಸಿದ್ಧವಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 
ಉತ್ತರ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಆದರೆ ಪ್ರತಿಪಕ್ಷಗಳು ಚುನಾವಣಾ ಫಲಿತಾಂಶವನ್ನು ನೋಟು ನಿಷೇಧದ ಬಗೆಗಿನ ಜನಮತವೆಂದು ಪರಿಗಣಿಸುವುದಾದರೆ ಬಿಜೆಪಿ ಆ ಸವಾಲನ್ನು ಸ್ವೀಕರಿಸಲು ಸಿದ್ಧವಿದೆ ಎಂದು ಶಾ ಸಿಎನ್ಎನ್ ಐಬಿಎನ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. 
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಸರ್ಕಾರ ರಚನೆ ಮಾಡಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಹಾಗೂ ಹೆಚ್ಚಿರುವ ಭ್ರಷ್ಟಾಚಾರದಿಂದ ವಿಷಯಾಂತರ ಮಾಡಲು ಸಿಎಂ ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಕುಟುಂಬ ಕಲಹದಲ್ಲಿ ಶಾಮೀಲಾಗಿದ್ದರು ಎಂದು ಅಮಿತ್ ಶಾ ಆರೋಪಿಸಿದ್ದಾರೆ. 
ಇದೇ ವೇಳೆ ಮೀಸಲಾತಿ ಕುರಿತು ಆರ್ ಎಸ್ಎಸ್ ಮುಖಂಡ ಮೋಹನ್ ವೈದ್ಯ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ, ಬಿಜೆಪಿ ಹಾಗೂ ಆರ್ ಎಸ್ಎಸ್ ಮೀಸಲಾತಿ ವಿರುದ್ಧ ಇಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಅಮಿತ್ ಶಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT