ಅಮಿತ್ ಶಾ 
ದೇಶ

ಉ.ಪ್ರ ಚುನಾವಣೆ ಫಲಿತಾಂಶವನ್ನು ನೋಟು ಅಮಾನ್ಯಕ್ಕೆ ಜನಮತವನ್ನಾಗಿ ಪರಿಗಣಿಸಲು ಸಿದ್ಧ: ಶಾ

ಬಿಜೆಪಿ ಪ್ರತಿಪಕ್ಷಗಳ ಸವಾಲಿಗೆ ಸಿದ್ಧವಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶ ನೋಟು ಅಮಾನ್ಯದ ನಿರ್ಧಾರಕ್ಕೆ ಜನಮತವಾಗಲು ಸಾಧ್ಯವಿಲ್ಲವಾದರೂ, ಪ್ರತಿಪಕ್ಷಗಳು ಅದನ್ನೇ ಪ್ರಧಾನವಾಗಿ ಪರಿಗಣಿಸುವುದಾದರೆ ಬಿಜೆಪಿ ಪ್ರತಿಪಕ್ಷಗಳ ಸವಾಲಿಗೆ ಸಿದ್ಧವಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 
ಉತ್ತರ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಆದರೆ ಪ್ರತಿಪಕ್ಷಗಳು ಚುನಾವಣಾ ಫಲಿತಾಂಶವನ್ನು ನೋಟು ನಿಷೇಧದ ಬಗೆಗಿನ ಜನಮತವೆಂದು ಪರಿಗಣಿಸುವುದಾದರೆ ಬಿಜೆಪಿ ಆ ಸವಾಲನ್ನು ಸ್ವೀಕರಿಸಲು ಸಿದ್ಧವಿದೆ ಎಂದು ಶಾ ಸಿಎನ್ಎನ್ ಐಬಿಎನ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. 
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಸರ್ಕಾರ ರಚನೆ ಮಾಡಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಹಾಗೂ ಹೆಚ್ಚಿರುವ ಭ್ರಷ್ಟಾಚಾರದಿಂದ ವಿಷಯಾಂತರ ಮಾಡಲು ಸಿಎಂ ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಕುಟುಂಬ ಕಲಹದಲ್ಲಿ ಶಾಮೀಲಾಗಿದ್ದರು ಎಂದು ಅಮಿತ್ ಶಾ ಆರೋಪಿಸಿದ್ದಾರೆ. 
ಇದೇ ವೇಳೆ ಮೀಸಲಾತಿ ಕುರಿತು ಆರ್ ಎಸ್ಎಸ್ ಮುಖಂಡ ಮೋಹನ್ ವೈದ್ಯ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ, ಬಿಜೆಪಿ ಹಾಗೂ ಆರ್ ಎಸ್ಎಸ್ ಮೀಸಲಾತಿ ವಿರುದ್ಧ ಇಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಅಮಿತ್ ಶಾ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

ಶರಣಾಗತಿಯನ್ನೇ ಕಾರ್ಯತಂತ್ರವೆಂದು ತಪ್ಪಾಗಿ ತಿಳಿದುಕೊಂಡ ಮೋದಿ; ಎಫ್‌ಸ್ಟೀನ್ ಫೈಲ್ಸ್‌ ಭಯ: ಸಿದ್ದರಾಮಯ್ಯ

ಒಮ್ಮೆ ಆದ್ರೂ ಭಾರತೀಯ ಅಭಿಮಾನಿಗಳ ಹೃದಯ ಹೊಡೆಯಬೇಕು ಅನಿಸುತ್ತಿದೆ: ಫೈನಲ್ ಪಂದ್ಯಕ್ಕೂ ಮುನ್ನ ಪ್ಯಾಟ್ ಕಮ್ಮಿನ್ಸ್!

'Tateeree'ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ಖ್ಯಾತ ರಾಪರ್ ಬಂಧನಕ್ಕೆ ಪೊಲೀಸರಿಂದ ಹುಡುಕಾಟ!

ಲೋಕಸಭೆ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ: TMC ಬೆಂಬಲ!

SCROLL FOR NEXT