ಸುರೇಶ್ ರಾಣಾ 
ದೇಶ

ನಾನು ಮತ್ತೆ ಗೆದ್ದರೆ ಕೈರಾನದಲ್ಲಿ ಕರ್ಫ್ಯೂ ಕಾಯಂ: ಬಿಜೆಪಿ ಶಾಸಕ ಸುರೇಶ್ ರಾಣಾ

ನಾನು ಮತ್ತೆ ಉತ್ತರ ಪ್ರದೇಶ ವಿಧಾಸಭೆಗೆ ಆಯ್ಕೆಯಾದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸುವುದಾಗಿ..

ಮುಜಾಫರನಗರ್: ನಾನು ಮತ್ತೆ ಉತ್ತರ ಪ್ರದೇಶ ವಿಧಾಸಭೆಗೆ ಆಯ್ಕೆಯಾದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸುವುದಾಗಿ ಬಿಜೆಪಿ ಶಾಸಕ ಸುರೇಶ್ ರಾಣಾ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
2013ರ ಮುಜಾಫರನಗರ್ ಗಲಭೆ ಪ್ರಕರಣದ ಆರೋಪಿಯಾಗಿರುವ ರಾಣಾ, ಶ್ಯಾಮ್ಲಿ ಜಿಲ್ಲೆಯ ಥಾಣ ಭವನ್ ವಿಧಾನಸಭಾ ಕ್ಷೇತ್ರದಿಂದ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ತಮ್ಮ ಕ್ಷೇತ್ರದಲ್ಲಿ ಶನಿವಾರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಣಾ, ಒಂದು ವೇಳೆ ಚುನಾವಣೆಯಲ್ಲಿ ನಾನು ಮತ್ತೆ ಗೆದ್ದು ಬಂದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದಿದ್ದಾರೆ.
ರಾಣಾ ಅವರ ಈ ವಿವಾದಾತ್ಮಕ ಹೇಳಿಕೆಗೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 
ಇನ್ನು ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಣಾ, ನಾನು ರಾಜ್ಯದಲ್ಲಿ ಭಯೋತ್ಪಾದನೆಯನ್ನು ಹರಡುತ್ತಿರುವ ಗೂಂಡಾಗಳ ಬಗ್ಗೆ ಹೇಳಿದ್ದೇನೆ. ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಬೇಡಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT