ಸುರೇಶ್ ರಾಣಾ 
ದೇಶ

ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸುರೇಶ್ ರಾಣಾ ವಿರುದ್ಧ ಕೇಸ್ ದಾಖಲು

ನಾನು ಮತ್ತೆ ಉತ್ತರ ಪ್ರದೇಶ ವಿಧಾಸಭೆಗೆ ಆಯ್ಕೆಯಾದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸುವುದಾಗಿ....

ಮುಜಾಫರನಗರ್: ನಾನು ಮತ್ತೆ ಉತ್ತರ ಪ್ರದೇಶ ವಿಧಾಸಭೆಗೆ ಆಯ್ಕೆಯಾದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸುರೇಶ್ ರಾಣಾ ಅವರ ವಿರುದ್ಧ ಸೋಮವಾರ ಪೊಲೀಸ್ ಕೇಸ್ ದಾಖಲಿಸಿಕೊಂಡಿದ್ದಾರೆ.
ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಬಿಜೆಪಿ ಶಾಸಕನ ವಿರುದ್ಧ ಕೇಸ್ ದಾಖಲಿಸಿದ್ದಾರೆ.
2013ರ ಮುಜಾಫರನಗರ್ ಗಲಭೆ ಪ್ರಕರಣದ ಆರೋಪಿಯಾಗಿರುವ ರಾಣಾ, ಶ್ಯಾಮ್ಲಿ ಜಿಲ್ಲೆಯ ಥಾಣ ಭವನ್ ವಿಧಾನಸಭಾ ಕ್ಷೇತ್ರದಿಂದ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ತಮ್ಮ ಕ್ಷೇತ್ರದಲ್ಲಿ ಶನಿವಾರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ರಾಣಾ, ಒಂದು ವೇಳೆ ಚುನಾವಣೆಯಲ್ಲಿ ನಾನು ಮತ್ತೆ ಗೆದ್ದು ಬಂದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT