ಕೇಂದ್ರದ ಮಾಜಿ ಸಚಿವ ಇ. ಅಹ್ಮದ್ 
ದೇಶ

ಬಜೆಟ್ ಅಧಿವೇಶನದಲ್ಲಿ ಕುಸಿದು ಬಿದ್ದ ಮಾಜಿ ಸಚಿವ ಇ.ಅಹ್ಮದ್

ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾದ ಕೆಲವೇ ನಿಮಿಷಗಳಲ್ಲಿ ಕೇರಳದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಇ. ಅಹ್ಮದ್ ಅವರು ದಿಢೀರನೇ ಕುಸಿದುಬಿದ್ದಿದ್ದಾರೆಂದು ಮಂಗಳವಾರ ವರದಿಗಳು ತಿಳಿಸಿವೆ...

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾದ ಕೆಲವೇ ನಿಮಿಷಗಳಲ್ಲಿ ಕೇರಳದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಇ. ಅಹ್ಮದ್ ಅವರು ದಿಢೀರನೇ ಕುಸಿದುಬಿದ್ದಿದ್ದಾರೆಂದು ಮಂಗಳವಾರ ವರದಿಗಳು ತಿಳಿಸಿವೆ.

ನಾಳೆ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು. ವಿತ್ತ ಸಚಿವ ಅರುಣ್ ಜೇಟ್ಲಿ 2017-18ನೇ ಸಾಲಿನ ಆಯವ್ಯಯ ಮಂಡನೆ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭಾಷಣ ಮಾಡುತ್ತಿದ್ದರು. ಭಾಷಣ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅಹ್ಮದ್ ಅವರು ಕುಳಿತುಕೊಂಡಿದ್ದ ಸ್ಥಳದಿಂದಲೇ ಕುಸಿದು ಬಿದ್ದಿದ್ದಾರೆಂದು ತಿಳಿದುಬಂದಿದೆ.

ಅಹ್ಮದ್ ಅವರು ಕುಸಿದು ಬೀಳುತ್ತಿದ್ದಂತೆಯೇ ಕೂಡಲೇ ಅವರನ್ನು ಸ್ಟ್ರೆಚರ್ ನಲ್ಲಿ ಸಂಸತ್ತಿನಿಂದ ಹೊರಗೆ ಕರೆದುಕೊಂಡು ಹೋಗಿ ರಾಮ್ ಮನೋಹರ್ ಲೋಹಿಯಾ (ಆರ್'ಎಂಎಲ್) ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಸ್ತುತ ಅಹ್ಮದ್ ಅವರು ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಹೇಳಲಾಗುತ್ತಿದೆ.

ಐಯುಎಂಎಲ್ ನ ರಾಷ್ಟ್ರೀಕ ಅಧ್ಯಕ್ಷರಾಗಿರುವ 78 ವರ್ಷದ ಇ. ಆಹ್ಮದ್ ಅವರು ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದ ವೇಳೆ ವಿದೇಶಾಂಕ ಸಚಿವಾಲಯದ ಸಹಾಯಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಮಲ್ಲಪ್ಪುರಂ ಲೋಕಸಭಾ ಕ್ಷೇತ್ರದ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?