ವಿಕಾಸ್ ಸ್ವರೂಪ್ 
ದೇಶ

ಉಗ್ರ ಹಫೀಜ್ ಸೈಯೀದ್ ಗೃಹ ಬಂಧನ: ಪೂರಕ ಸಾಕ್ಷ್ಯಾಧಾರ ನೀಡುವಂತೆ ಪಾಕ್‌ಗೆ ಭಾರತ

ಮುಂಬೈ ದಾಳಿ ರೂವಾರಿ, ಪಾಕಿಸ್ತಾನದ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ರನ್ನು ಗೃಹಬಂಧನದಲ್ಲಿ ಇಡಲಾಗಿದೆ ಎಂದು ಪಾಕ್ ಪತ್ರಿಕೆಗಳಲ್ಲಿ...

ನವದೆಹಲಿ: ಮುಂಬೈ ದಾಳಿ ರೂವಾರಿ, ಪಾಕಿಸ್ತಾನದ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ರನ್ನು ಗೃಹಬಂಧನದಲ್ಲಿ ಇಡಲಾಗಿದೆ ಎಂದು ಪಾಕ್ ಪತ್ರಿಕೆಗಳಲ್ಲಿ ವರದಿಯಾಗಿದ್ದು ಇದು ನಂಬಲು ಸಾಧ್ಯವಿಲ್ಲ. ಈ ಸಂಬಂಧ ಪೂರಕ ಸಾಕ್ಷ್ಯಾಧಾರ ನೀಡುವಂತೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ. 
ಹಫೀಜ್ ಸಯೀದ್ ಸೇರಿದಂತೆ ನಾಲ್ವರನ್ನು ಗೃಹಬಂಧನದಲ್ಲಿ ಇಡಲಾಗಿದೆ ಎಂದು ಪಾಕಿಸ್ತಾನ ಪತ್ರಿಕೆಗಳು ವರದಿ ಮಾಡಿದ್ದು ಈ ಬಗ್ಗೆ ಗುಮಾನಿ ವ್ಯಕ್ತಪಡಿಸಿರುವ ವಿಕಾಸ್ ಸ್ವರೂಪ್. ಇಂತಹ ಕಸರತ್ತುಗಳನ್ನು ಪಾಕಿಸ್ತಾನ ಈ ಹಿಂದೆಯೂ ಮಾಡಿತ್ತು ಎಂದು ಹೇಳಿದ್ದಾರೆ. 
ಇದೇ ವೇಳೆ ನೈಜ ವಿಶ್ವಾಸಾರ್ಹ ಕಾರ್ಯಾಚರಣೆ ನಡೆದಿದ್ದರೆ ಅದು ಪಾಕಿಸ್ತಾನದ ಪ್ರಾಮಾಣಿಕತೆಯ ಸಾಕ್ಷ್ಯಾಧಾರವಾಗುತ್ತದೆ ಎಂದರು. ಹಫೀಜ್ ಸಯೀದ್ ನನ್ನು ಗೃಹಬಂಧನದಲ್ಲಿಡಲಾಗಿದೆ ಎಂಬ ವರದಿಗಳನ್ನು ಪಾಕಿಸ್ತಾನದ ವಿವಿಧ ಪತ್ರಿಕೆಗಳು ತಮ್ಮ ಮುಖಪುಟಗಳಲ್ಲಿ ಪ್ರಕಟಿಸಿವೆ. 
ಗೃಹ ಬಂಧನದಲ್ಲಿರುವ ಉಗ್ರ ಸಯೀದ್ 2008ರ 26/11 ಮುಂಬೈದಾಳಿಯ ಪ್ರಮುಖ ರುವಾರಿಯಾಗಿದ್ದು, ಭಾರತ-ಅಮೆರಿಕಾ ರಾಷ್ಟ್ರಗಳಿಗೆ ಬೇಕಿರುವ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದಾನೆ. ಮುಂಬೈ ದಾಳಿಯಲ್ಲಿ ಹಲವಾರು ಅಮಾಯಕ ಜೀವಗಳ ಸಾವಿಗೆ ಕಾರಣನಾಗಿದ್ದ ಸಯೀದ್ ನನ್ನು ವಿಶ್ವ ಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಯಲ್ಲಿ ಸೇರಿಸುವಂತೆ ಭಾರತ ಈ ಹಿಂದಿನಿಂದಲೂ ಆಗ್ರಹಿಸುತ್ತಲೇ ಬಂದಿದ್ದರೂ, ಪಾಕಿಸ್ತಾನ ಮಾತ್ರ ಆತನನ್ನು ರಕ್ಷಿಸುವ ತನ್ನ ಪ್ರಯತ್ನವನ್ನು ಮುಂದುವರೆಸುತ್ತಲೇ ಬಂದಿತ್ತು. ಇದೀಗ ಪಾಕಿಸ್ತಾನ ಸರ್ಕಾರವೇ ಹಫೀಜ್'ಗೆ ಗೃಹಬಂಧನದಲ್ಲಿ ಇರಿಸಿರುವ ಹಿನ್ನಲೆ ಈ ಬಗ್ಗೆ ಪಾಕಿಸ್ತಾನ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ನಡೆಯುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT