ಸಾಂದರ್ಭಿಕ ಚಿತ್ರ 
ದೇಶ

ಉ.ಪ್ರದೇಶದಲ್ಲಿ ಅಮಾನವೀಯ ಕೃತ್ಯ: ಭದ್ರತಾ ಸಿಬ್ಬಂದಿಯ ಕೈಬೆರಳು ಕತ್ತರಿಸಿದ ದುಷ್ಕರ್ಮಿಗಳು

ರೈಲ್ವೇ ಗೇಟ್ ತೆಗೆಯಲು ನಿರಾಕರಿಸಿದ್ದ ಭದ್ರತಾ ಸಿಬ್ಬಂದಿಯೊಬ್ಬನ ಕೈ ಬೆರಳುಗಳನ್ನು ಕತ್ತರಿಸಿರುವ ಘಟನೆಯೊಂದು ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ...

ಮೊರಾದಾಬಾದ್: ರೈಲ್ವೇ ಗೇಟ್ ತೆಗೆಯಲು ನಿರಾಕರಿಸಿದ್ದ ಭದ್ರತಾ ಸಿಬ್ಬಂದಿಯೊಬ್ಬನ ಕೈ ಬೆರಳುಗಳನ್ನು ಕತ್ತರಿಸಿರುವ ಘಟನೆಯೊಂದು ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಜೈಪ್ರಕಾಶ್ ಪಟೇಲ್ ಸಂತ್ರಸ್ತ ವ್ಯಕ್ತಿ. ಕಳೆದ ರಾತ್ರಿ ಪಟೇಲ್ ಅವರು ಭೋಜ್ಪುರ ರೈಲ್ವೆ ಗೇಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ರೈಲು ಬರುತ್ತಿರುವ ಸಂದೇಶ ಬಂದ ಹಿನ್ನಲೆಯಲ್ಲಿ ಪ್ರವೇಶ ದ್ವಾರವನ್ನು ಮುಚ್ಚಿದ್ದರು. ಈ ವೇಳೆ ಕೆಲ ಪ್ರಾಣಿಗಳೊಂದಿಗೆ ವಾಹನದಲ್ಲಿ ಗೇಟ್ ಬಳಿ ಬಂದಿರುವ ಮಾಂಸ ದಂಧೆಕೋರರು ಗೇಟ್ ತೆಗೆಯುವಂತೆ ತಿಳಿಸಿದ್ದಾರೆ.

ಸಿಗ್ನಲ್ ಇದ್ದು, ಸಿಗ್ನಲ್ ಗೂ ಮುನ್ನವೇ ಗೇಟ್ ತೆಗೆಯಲು ಸಾಧ್ಯವಿಲ್ಲ ಎಂದು ಪಟೇಲ್ ಅವರು ತಿಳಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಮಾಂಸ ದಂಧೋಕೋರರು ಚಾಕುವನ್ನು ತೆಗೆದುಕೊಂಡು ಪಟೇಲ್ ಅವರ ಕೈ ಬೆರಳುಗಳನ್ನು ಕತ್ತರಿಸಿ ರಾಕ್ಷಸ ವರ್ತನೆಯನ್ನು ಮರೆದಿದ್ದಾರೆ.

ಪ್ರಸ್ತುದ ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆ ಕಲಂ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಸ್ರೇಲ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಜೆರುಸಲೆಮ್ ಬಸ್ ಮೇಲೆ ಗುಂಡಿನ ದಾಳಿ: 5 ಸಾವು, 12 ಜನರಿಗೆ ಗಾಯ

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!

ಕೋಮು ಘರ್ಷಣೆ: ಸೆಪ್ಟೆಂಬರ್ 9 ರಂದು ಮದ್ದೂರು ಬಂದ್‌ಗೆ ಬಿಜೆಪಿ ಕರೆ

ನಾಳೆ ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ BRS-BJD ದೂರ; ಇದು INDIA ಅಭ್ಯರ್ಥಿ ವಿರುದ್ಧ NDA ಅಭ್ಯರ್ಥಿ ಗೆಲುವಿಗೆ ವರವಾಗುತ್ತಾ?

ರಷ್ಯಾದಿಂದ ತೈಲ ಖರೀದಿ "ರಕ್ತದ ಹಣ": ಭಾರತದ ಮೇಲೆ ಮತ್ತೆ ಕಿಡಿ ಕಾರಿದ ವ್ಯಾಪಾರ ಸಲಹೆಗಾರ ಪೀಟರ್ ನವರೊ!

SCROLL FOR NEXT