ರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ 
ದೇಶ

ಬಜೆಟ್ ಮಂಡನೆ ಮಾಡುವ ಮೂಲಕ ಕೇಂದ್ರ ಇ.ಅಹ್ಮದ್'ರಿಗೆ ಅಗೌರವ ತೋರಿದೆ: ಕೇರಳ ಸಿಎಂ

ಕೇಂದ್ರ ಮಾಜಿ ಸಚಿವ ಇ. ಅಹಮದ್ ನಿಧನದ ಸುದ್ದಿ ತಿಳಿದಿದ್ದರೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಈ ಮೂಲಕ ಇ. ಅಹಮದ್ ಅವರಿಗೆ ಕೇಂದ್ರ ಅಗೌರವವನ್ನು ತೋರಿಸಿದೆ ಎಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌...

ತಿರುವನಂತಪುರ: ಕೇಂದ್ರ ಮಾಜಿ ಸಚಿವ ಇ. ಅಹಮದ್ ನಿಧನದ ಸುದ್ದಿ ತಿಳಿದಿದ್ದರೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಈ ಮೂಲಕ ಇ. ಅಹಮದ್ ಅವರಿಗೆ ಕೇಂದ್ರ ಅಗೌರವವನ್ನು ತೋರಿಸಿದೆ ಎಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ನಿನ್ನೆಯಷ್ಟೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಸಂಸತ್ತಿನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದುರು. ಈ ವೇಳೆ ಅಹಮದ್ ಅವರು ಕುಸಿದು ಬಿದ್ದಿದ್ದರು. ಅವರ ಸಾವಿನ ಸುದ್ದಿ ತಿಳಿದ ನಂತರವೂ ಕೇಂದ್ರ ಇಂದು ಬಜೆಜ್ ಮಂಡನೆ ಮಾಡಿರುವುದು ಸರಿಯಾದುದಲ್ಲ ಹಾಗೂ ಇದೊಂದು ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.

ನಿಧನ ಸುದ್ದಿ ತಿಳಿದ ಬಳಿಕವೂ ಕೇಂದ್ರ ಬಜೆಟ್ ಮಂಡನೆ ಮಾಡಿರುವುದು ಜನರ ಮನಸ್ಸಿಗೆ ಹಾಗೂ ಭಾವನೆಗಳಿಗೆ ನೋವುಂಟು ಮಾಡಿದಂತಾಗಿದೆ. ಕೇಂದ್ರ ಬಜೆಟ್ ಮಂಡನೆ ಮಾಡುವ ಮೂಲಕ ಇ. ಅಹಮದ್ ಅವರಿಗೆ ಆಗೌರವವನ್ನು ತೋರಿದೆ. ಹಿರಿಯ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಬದಲು ಕೇಂದ್ರ ಬಜೆಟ್ ಮಂಡನೆ ಮಾಡುವ ಮೂಲಕ ದೊಡ್ಡ ತಪ್ಪನ್ನು ಮಾಡಿದೆ.

ಅಹಮದ್ ಅವರು ಸಂಸತ್ತಿನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ನಾಯಕರಾಗಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲೂ ಸಾಕಷ್ಟು ಹೆಸರು ಮಾಡಿದ್ದರು. ದೇಶದ ಪ್ರತಿನಿಧಯಾಗಿ ವಿಶ್ವಸಂಸ್ಥೆಯಲ್ಲಿ ದೇಶ ಹಿತಾಸಕ್ತಿಗಳನ್ನು ಎತ್ತಿಹಿಡಿದ ವ್ಯಕ್ತಿಯಾಗಿದ್ದರು. ಇಂತಹ ವ್ಯಕ್ತಿಗೆ ಕೇಂದ್ರ ಆಗೌರವವನ್ನು ಸೂಚಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT