ಸಾಂದರ್ಭಿಕ ಚಿತ್ರ 
ದೇಶ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ದಾಖಲೆಗಳನ್ನು ಬಹಿರಂಗಪಡಿಸಿ:ಕೇಂದ್ರ ಮಾಹಿತಿ ಆಯೋಗ

ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ ಸಾರ್ವಜನಿಕ ಅಧಿಕಾರಿಗಳ ಬಗ್ಗೆ ಅವರ ಸ್ವತ್ತು, ಜಮೀನುಗಳ...

ನವದೆಹಲಿ: ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ ಸಾರ್ವಜನಿಕ ಅಧಿಕಾರಿಗಳ ಬಗ್ಗೆ ಅವರ ಸ್ವತ್ತು, ಜಮೀನುಗಳ ದಾಖಲೆಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕೆಂದು ಕೇಂದ್ರ ಮಾಹಿತಿ ಆಯೋಗ ಸರ್ಕಾರಕ್ಕೆ ಆದೇಶ ನೀಡಿದೆ.
ಸರ್ಕಾರಿ ಇಲಾಖೆಗಳಲ್ಲಿ ಪಾರದರ್ಶಕತೆಯ ಕಾವಲುನಾಯಿ(watchdog) ರೀತಿ ಕೆಲಸ ಮಾಡುವ ಮಾಹಿತಿ ಆಯೋಗ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ನಿರ್ದೇಶನ ನೀಡಿ ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಸರಕಾರಿ ಅಧಿಕಾರಿಗಳ ಸಂಖ್ಯಾತ್ಮಕ ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು, ಆದರೆ ಅವರ ಹೆಸರನ್ನು ಬಹಿರಂಗಪಡಿಸಬಾರದು ಎಂದು ಹೇಳಿದೆ.
ಯಾವುದೇ ಸನ್ನಿವೇಶದಲ್ಲಿಯೂ ಕೂಡ ಆರೋಪ, ಆಪಾದನೆಗಳನ್ನು ಎದುರಿಸುತ್ತಿರುವ ನೌಕರರ ಹೆಸರುಗಳನ್ನು ಬಹಿರಂಗಪಡಿಸಬಾರದು ಎಂದು ಮಾಹಿತಿ ಆಯುಕ್ತ ಯಶೋವರ್ದನ್ ಆಜಾದ್ ಹೇಳಿದ್ದಾರೆ.
ಹೀಗೆ ಅಂಕಿಅಂಶಗಳನ್ನು ಬಹಿರಂಗಪಡಿಸುವುದರಿಂದ ಸರ್ಕಾರಿ ಇಲಾಖೆಗಳಲ್ಲಿ ಉತ್ತಮ ಆಡಳಿತ ಸೃಷ್ಟಿಯಾಗುವ ಸಾಧ್ಯತೆಯಿದೆ ಅಲ್ಲದೆ ಸಾರ್ವಜನಿಕ ಹಿತಾಸಕ್ತಿಗೆ ನಿಸ್ಸಂಶಯವಾಗಿ ಸೇವೆ ಸಲ್ಲಿಸಬಹುದು ಎಂದು ಆಜಾದ್ ಹೇಳಿದರು.
ಅನೇಕ ಇಲಾಖೆಗಳಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ಮಾಹಿತಿ ಬಹಿರಂಗಪಡಿಸುವಂತೆ ಅಶೋಕ್ ಕುಮಾರ್ ರೆಡ್ಡಿ ಎಂಬುವವರು ಆರ್ ಟಿಐ ನಲ್ಲಿ ಮಾಹಿತಿ ಕೇಳಿ ವಿಚಾರಣೆ ನಡೆಸುವಾಗ ಹೀಗೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?