ನಿತೀಶ್ ಕುಮಾರ್ 
ದೇಶ

ಬಿಜೆಪಿ ವಿರುದ್ಧದ ಆರ್ ಜೆಡಿ ಸಮಾವೇಶಕ್ಕೆ ಜೆಡಿಯು ಗೈರು!

ಬಿಹಾರದ ಮಹಾಮೈತ್ರಿಯಲ್ಲಿ ಬಿರುಕು ಹೆಚ್ಚಿರುವುದು ಈಗ ಮತ್ತಷ್ಟು ಸ್ಪಷ್ಟವಾಗಿದ್ದು, ಬಿಜೆಪಿ ವಿರುದ್ಧ ಆರ್ ಜೆಡಿ ಆಗಸ್ಟ್ 27 ಕ್ಕೆ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದೆ.

ಪಾಟ್ನಾ: ಬಿಹಾರದ ಮಹಾಮೈತ್ರಿಯಲ್ಲಿ ಬಿರುಕು ಹೆಚ್ಚಿರುವುದು ಈಗ ಮತ್ತಷ್ಟು ಸ್ಪಷ್ಟವಾಗಿದ್ದು, ಬಿಜೆಪಿ ವಿರುದ್ಧ ಆರ್ ಜೆಡಿ ಆಗಸ್ಟ್ 27 ಕ್ಕೆ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದೆ. 
ಇದು ಆರ್ ಜೆಡಿ ರ್ಯಾಲಿಯಾಗಿದ್ದು, ಜೆಡಿಯು ಒಂದು ಪಕ್ಷವಾಗಿ ಅದರಲ್ಲಿ ಭಾಗಿಯಾಗುವುದಿಲ್ಲ. ಒಂದು ವೇಳೆ ಜೆಡಿಯು ರಾಷ್ಟ್ರಾಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಆರ್ ಜೆಡಿ ಆಹ್ವಾನ ನೀಡಿದರೆ ವ್ಯಕ್ತಿಗತವಾಗಿ ಸಮಾವೇಶದಲ್ಲಿ ಭಾಗವಹಿಸಬೇಕೋ ಬೇಡವೋ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ಯಾಮ್ ರಜಕ್ ಹೇಳಿದ್ದಾರೆ. 
ರಾಷ್ಟ್ರಪತಿ ಚುನಾವಣೆಗೆ ಜೆಡಿಯು ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರನ್ನು ಬೆಂಬಲಿಸಿತ್ತು. ಆದರೆ ಜೆಡಿಯು ಮಿತ್ರಪಕ್ಷವಾದ ಆರ್ ಜೆಡಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಬೆಂಬಲಿಸಿತ್ತು. ಇದಾದ ಬಳಿಕ ಸಂಸತ್ ನಲ್ಲಿ ನಡೆದ ಐತಿಹಾಸಿಕ ಜಿಎಸ್ ಟಿ ಜಾರಿ ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ತಮ್ಮ ಪ್ರತಿನಿಧಿಯನ್ನು ಕಳಿಸಿದ್ದರೆ, ಆರ್ ಜೆಡಿ ಹಾಗೂ ಕಾಂಗ್ರೆಸ್ ಜಿಎಸ್ ಟಿ ಜಾರಿ ಕಾರ್ಯಕ್ರಮವನ್ನು ವಿರೋಧಿಸಿದ್ದವು. ಈ ಎರಡೂ ಪ್ರಕರಣಗಳು ಜೆಡಿಯು ಮತ್ತು ಆರ್ ಜೆಡಿ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ರವಾನೆ ಮಾಡಿದ್ದವು. ಇದೀಗ ಆರ್ ಜೆಡಿ 2019 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಬಿಜೆಪಿ ವಿರುದ್ಧ ಬಿಜೆಪಿ ಹಠಾವೋ, ದೇಶ್ ಬಚಾವೋ ಸಮಾವೇಶವನ್ನು ಹಮ್ಮಿಕೊಂಡಿದೆ. ಆದರೆ ಜೆಡಿಯು ಮಾತ್ರ ಈ ಸಮಾವೇಶದಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದೆ. 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಹರ್ಯಾಣ ಮಾಜಿ ಸಿಎಂ ಓಮ್ ಪ್ರಕಾಶ್ ಚೌಟಾಲಾ, ಜಿಎಸ್ ಟಿ ಜಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸಹ  ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂಬ ನಿರೀಕ್ಷೆ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT