ಸಾಂದರ್ಭಿಕ ಚಿತ್ರ 
ದೇಶ

ದೋಕಾ ಲಾದಲ್ಲಿ ಹೆಚ್ಚು ಸೇನೆ ನಿಯೋಜಿಸಿದ ಭಾರತ, 1962ರ ನಂತರ ಅತ್ಯಂತ ಬಿಕ್ಕಟ್ಟಿನ ಸ್ಛಿತಿ ನಿರ್ಮಾಣ

ಸಿಕ್ಕಿಂನಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತ ದೋಕಾ ಲಾ ಪ್ರದೇಶದಲ್ಲಿ ಹೆಚ್ಚು ಸೇನೆ ನಿಯೋಜಿಸಿದ್ದು,....

ನವದೆಹಲಿ: ಸಿಕ್ಕಿಂನಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತ ದೋಕಾ ಲಾ ಪ್ರದೇಶದಲ್ಲಿ ಹೆಚ್ಚು ಸೇನೆ ನಿಯೋಜಿಸಿದ್ದು, ಇದರೊಂದಿಗೆ 1962ರ ಭಾರತ-ಚೀನಾ ಯುದ್ಧದ ನಂತರ ಅತ್ಯಂತ ಬಿಕ್ಕಟ್ಟಿನ ಸ್ಥಿತಿ ನಿರ್ಮಾಣವಾಗಿದೆ.
ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ ಎ) ಸಿಕ್ಕಿಂನಲ್ಲಿದ್ದ ಭಾರತದ ಎರಡು ಬಂಕ್ ರಗಳನ್ನು ನಾಶಪಡಿಸಿದ ನಂತರ ಭಾರತ ಆ ಪ್ರದೇಶದಲ್ಲಿ ಅತಿ ಹೆಚ್ಚು ಸೇನೆಯನ್ನು ನಿಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ದೋಕಾ ಲಾ ಲಾಲ್ಟೆನ್ ನಲ್ಲಿ 2012ರಲ್ಲಿ ನಿರ್ಮಿಸಲಾಗಿದ್ದ ಎರಡು ಬಂಕರ್ ಗಳನ್ನು ತೆರವುಗೊಳಿಸುವಂತೆ ಪಿಎಲ್ ಎ ಭಾರತೀಯ ಸೇನೆಗೆ ಕೇಳಿಕೊಂಡಿತ್ತು. ಆದರೂ ಭಾರತೀಯ ಸೇನೆ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ಜೂನ್ 6ರಂದು ಚೀನಾ ಬುಲ್ಡೋಜರ್ ಗಳನ್ನು ಬಳಸಿ ಭಾರತೀಯ ಬಂಕರ್ ಗಳನ್ನು ನಾಶಪಡಿಸಿತ್ತು. ಇದರ ಬೆನ್ನಲ್ಲೇ ಈಗ ಭಾರತ ಆ ಪ್ರದೇಶದಲ್ಲಿ ಹೆಚ್ಚು ಸೇನಾಪಡೆಗಳನ್ನು ನಿಯೋಜಿಸಿದೆ.
ಭಾರತೀಯ ಸೇನೆಯು ಸಿಕ್ಕಿಂ-ಚೀನಾ ಗಡಿ ಬಳಿ ತನ್ನ ಕೆಲ ತುಕಡಿಗಳನ್ನು ಕಳುಹಿಸಿದೆ. ಚೀನಾ ಸೇನೆಯು ಸಿಕ್ಕಿಂ ಗಡಿ ಬಳಿ ಕಳೆದ ಒಂದು ತಿಂಗಳಿನಿಂದ ಕ್ಯಾತೆ ತೆಗೆದು ಕಾಲುಕೆರೆದುಕೊಂಡು ಜಗಳಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಈ ಕ್ರಮ ಕೈಗೊಂಡಿದೆ. ಗಡಿಯಲ್ಲಿ ಈಗಾಗಲೇ ತುಕಡಿಗಳಿದ್ದರೂ ಹೆಚ್ಚಿನ ಸುರಕ್ಷತೆಗಾಗಿ ಇನ್ನಷ್ಟು ಸೈನಿಕರನ್ನು ನಿಯೋಜಿಸಲಾಗಿದೆ.
ದೋಕಾ ಲಾ ಪ್ರದೇಶವು ತನಗೆ ಸೇರಿದ್ದು ಎಂಬುದು ಚೀನಾದ ವಾದವಾಗಿದೆ. ಭೂತಾನ್'ದ್ದೆಂದು ಹೇಳಲಾಗುವ ಈ ಪ್ರದೇಶದಲ್ಲಿ ಭಾರತ ಮತ್ತು ಭೂತಾನ್ ದೇಶಗಳ ಸೈನಿಕರು ಜಂಟಿಯಾಗಿ ಹಲವು ವರ್ಷಗಳಿಂದ ಪಹರೆ ನಡೆಸಿಕೊಂಡು ಬಂದಿದ್ದಾರೆ. 2012ರಲ್ಲಿ ಹೆಚ್ಚಿನ ಭದ್ರತೆಯ ದೃಷ್ಟಿಯಿಂದ ಭಾರತೀಯ ಸೇನೆಯು ಇಲ್ಲಿ ಎರಡು ಬಂಕರ್'ಗಳನ್ನೂ ಸ್ಥಾಪಿಸಿತ್ತು. ಈಗ ಅವನ್ನು ಚೀನಾ ನಾಶ ಮಾಡಿದೆ. ಜೊತೆಗೆ ಚೀನಾ ಸಾಕಷ್ಟು ಸಂಖ್ಯೆಯಲ್ಲಿ ತನ್ನ ಸೇನಾ ತುಕಡಿಗಳನ್ನು ಸ್ಥಳಕ್ಕೆ ಕರೆತಂದಿದೆ. ಹೀಗಾಗಿ ಭಾರತೀಯ ಸೇನೆಯ ಅನಿವಾರ್ಯವಾಗಿ ತನ್ನ ತುಕಡಿಗಳ ಬಲ ವೃದ್ಧಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT