ಸಾಂದರ್ಭಿಕ ಚಿತ್ರ 
ದೇಶ

ದೋಕಾ ಲಾದಲ್ಲಿ ಹೆಚ್ಚು ಸೇನೆ ನಿಯೋಜಿಸಿದ ಭಾರತ, 1962ರ ನಂತರ ಅತ್ಯಂತ ಬಿಕ್ಕಟ್ಟಿನ ಸ್ಛಿತಿ ನಿರ್ಮಾಣ

ಸಿಕ್ಕಿಂನಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತ ದೋಕಾ ಲಾ ಪ್ರದೇಶದಲ್ಲಿ ಹೆಚ್ಚು ಸೇನೆ ನಿಯೋಜಿಸಿದ್ದು,....

ನವದೆಹಲಿ: ಸಿಕ್ಕಿಂನಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತ ದೋಕಾ ಲಾ ಪ್ರದೇಶದಲ್ಲಿ ಹೆಚ್ಚು ಸೇನೆ ನಿಯೋಜಿಸಿದ್ದು, ಇದರೊಂದಿಗೆ 1962ರ ಭಾರತ-ಚೀನಾ ಯುದ್ಧದ ನಂತರ ಅತ್ಯಂತ ಬಿಕ್ಕಟ್ಟಿನ ಸ್ಥಿತಿ ನಿರ್ಮಾಣವಾಗಿದೆ.
ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ ಎ) ಸಿಕ್ಕಿಂನಲ್ಲಿದ್ದ ಭಾರತದ ಎರಡು ಬಂಕ್ ರಗಳನ್ನು ನಾಶಪಡಿಸಿದ ನಂತರ ಭಾರತ ಆ ಪ್ರದೇಶದಲ್ಲಿ ಅತಿ ಹೆಚ್ಚು ಸೇನೆಯನ್ನು ನಿಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ದೋಕಾ ಲಾ ಲಾಲ್ಟೆನ್ ನಲ್ಲಿ 2012ರಲ್ಲಿ ನಿರ್ಮಿಸಲಾಗಿದ್ದ ಎರಡು ಬಂಕರ್ ಗಳನ್ನು ತೆರವುಗೊಳಿಸುವಂತೆ ಪಿಎಲ್ ಎ ಭಾರತೀಯ ಸೇನೆಗೆ ಕೇಳಿಕೊಂಡಿತ್ತು. ಆದರೂ ಭಾರತೀಯ ಸೇನೆ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ಜೂನ್ 6ರಂದು ಚೀನಾ ಬುಲ್ಡೋಜರ್ ಗಳನ್ನು ಬಳಸಿ ಭಾರತೀಯ ಬಂಕರ್ ಗಳನ್ನು ನಾಶಪಡಿಸಿತ್ತು. ಇದರ ಬೆನ್ನಲ್ಲೇ ಈಗ ಭಾರತ ಆ ಪ್ರದೇಶದಲ್ಲಿ ಹೆಚ್ಚು ಸೇನಾಪಡೆಗಳನ್ನು ನಿಯೋಜಿಸಿದೆ.
ಭಾರತೀಯ ಸೇನೆಯು ಸಿಕ್ಕಿಂ-ಚೀನಾ ಗಡಿ ಬಳಿ ತನ್ನ ಕೆಲ ತುಕಡಿಗಳನ್ನು ಕಳುಹಿಸಿದೆ. ಚೀನಾ ಸೇನೆಯು ಸಿಕ್ಕಿಂ ಗಡಿ ಬಳಿ ಕಳೆದ ಒಂದು ತಿಂಗಳಿನಿಂದ ಕ್ಯಾತೆ ತೆಗೆದು ಕಾಲುಕೆರೆದುಕೊಂಡು ಜಗಳಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಈ ಕ್ರಮ ಕೈಗೊಂಡಿದೆ. ಗಡಿಯಲ್ಲಿ ಈಗಾಗಲೇ ತುಕಡಿಗಳಿದ್ದರೂ ಹೆಚ್ಚಿನ ಸುರಕ್ಷತೆಗಾಗಿ ಇನ್ನಷ್ಟು ಸೈನಿಕರನ್ನು ನಿಯೋಜಿಸಲಾಗಿದೆ.
ದೋಕಾ ಲಾ ಪ್ರದೇಶವು ತನಗೆ ಸೇರಿದ್ದು ಎಂಬುದು ಚೀನಾದ ವಾದವಾಗಿದೆ. ಭೂತಾನ್'ದ್ದೆಂದು ಹೇಳಲಾಗುವ ಈ ಪ್ರದೇಶದಲ್ಲಿ ಭಾರತ ಮತ್ತು ಭೂತಾನ್ ದೇಶಗಳ ಸೈನಿಕರು ಜಂಟಿಯಾಗಿ ಹಲವು ವರ್ಷಗಳಿಂದ ಪಹರೆ ನಡೆಸಿಕೊಂಡು ಬಂದಿದ್ದಾರೆ. 2012ರಲ್ಲಿ ಹೆಚ್ಚಿನ ಭದ್ರತೆಯ ದೃಷ್ಟಿಯಿಂದ ಭಾರತೀಯ ಸೇನೆಯು ಇಲ್ಲಿ ಎರಡು ಬಂಕರ್'ಗಳನ್ನೂ ಸ್ಥಾಪಿಸಿತ್ತು. ಈಗ ಅವನ್ನು ಚೀನಾ ನಾಶ ಮಾಡಿದೆ. ಜೊತೆಗೆ ಚೀನಾ ಸಾಕಷ್ಟು ಸಂಖ್ಯೆಯಲ್ಲಿ ತನ್ನ ಸೇನಾ ತುಕಡಿಗಳನ್ನು ಸ್ಥಳಕ್ಕೆ ಕರೆತಂದಿದೆ. ಹೀಗಾಗಿ ಭಾರತೀಯ ಸೇನೆಯ ಅನಿವಾರ್ಯವಾಗಿ ತನ್ನ ತುಕಡಿಗಳ ಬಲ ವೃದ್ಧಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT