ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ದೇಶ

ಸೀಮಿತ ದಾಳಿ ಭಾರತದ ಮೇಲೆ ವಿಶ್ವಕ್ಕಿದ್ದ ದೃಷ್ಟಿಕೋನವನ್ನೇ ಬದಲಿಸಿದೆ: ಅಮಿತ್ ಶಾ

ಪಾಕಿಸ್ತಾನ ಅಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಯು ಭಾರತದ ಮೇಲೆ ವಿಶ್ವಕ್ಕಿದ್ದ ದೃಷ್ಟಿಕೋನವನ್ನೇ ಬದಲಾಯಿಸಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...

ಪಣಜಿ: ಪಾಕಿಸ್ತಾನ ಅಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಯು ಭಾರತದ ಮೇಲೆ ವಿಶ್ವಕ್ಕಿದ್ದ ದೃಷ್ಟಿಕೋನವನ್ನೇ ಬದಲಾಯಿಸಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಪಣಜಿಯಲ್ಲಿ ಮಾತನಾಡಿರುವ ಅವರು, ಉಗ್ರರ ನೆಲೆಗಳ ಮೇಲೆ ಸೇನೆ ನಡೆಸಿದ್ದ ಸೀಮಿತ ದಾಳಿ ಭಾರತ ಸ್ವರಕ್ಷಣೆಗೆ ಬದ್ಧವಾಗಿದೆ ಎಂಬ ಸಂದೇಶವನ್ನು ಇಡೀ ವಿಶ್ವಕ್ಕೆ ಸಾರಿತ್ತು. ಪ್ರತೀನಿತ್ಯ ಉಗ್ರರು ನಮ್ಮ ಗಡಿ ನುಗ್ಗಿ ನಮ್ಮ ಸೇನೆಯ ಮೇಲೆ ದಾಳಿ ನಡೆಸುತ್ತಿತ್ತು. 
ಪ್ರಸ್ತುತ ಉಗ್ರರು ದಾಳಿ ನಡೆಸುತ್ತಿಲ್ಲ ಎಂದು ನಾನು ಹೇಳುತ್ತಿಲ್ಲ. ಈಗಲೂ ಉಗ್ರರು ದಾಳಿ ನಡೆಸುತ್ತಿದ್ದಾರೆ. ಆದರೆ, ಉರಿ ಉಗ್ರ ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ನೇತೃತ್ವದ  ಎನ್'ಡಿಎ ಸರ್ಕಾರ ಸೀಮಿತ ದಾಳಿ ನಡೆಸಿತ್ತು. ಈ ಮೂಲಕ ಸ್ವರಕ್ಷಣೆಗೆ ಭಾರತ ಸಿದ್ಧವಾಗಿದೆ ಎಂಬ ಸಂದೇಶವನ್ನು ಇಡೀ ವಿಶ್ವಕ್ಕೆ ರವಾಸಿದ್ದೆವು. ಅಮೆರಿಕ ರಾಷ್ಟ್ರ ಹೊರತುಪಡಿಸಿ ವಿಶ್ವದ ಯಾವುದೇ ರಾಷ್ಟ್ರಗಳು ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದೆವು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್