ಬಂಧಿತ ಯುವತಿ ಕೃಷ್ಣೇಂದು 
ದೇಶ

ಕೇರಳ: 83 ಜನರಿಗೆ ವಂಚಿಸಿದ್ದ 21 ವರ್ಷದ ಯುವತಿ ಪೊಲೀಸರ ಬಲೆಗೆ

ವಿದೇಶಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 83 ಮಂದಿಗೆ ವಂಚಿಸಿದ ಆರೋಪದಲ್ಲಿ 21 ವರ್ಷದ ಯುವತಿಯನ್ನು ಪೊಲೀಸರು...

ಕೊಚ್ಚಿ: ವಿದೇಶಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 83 ಮಂದಿಗೆ ವಂಚಿಸಿದ ಆರೋಪದಲ್ಲಿ 21 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಗಲ್ಫ್ ದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ 83 ಮಂದಿಯಿಂದು ಸುಮಾರು 45 ಲಕ್ಷ ರೂಪಾಯಿಗಳನ್ನು ಲಪಟಾಯಿಸಿದ ಆರೋಪದಲ್ಲಿ, ಕೇರಳದ ತ್ರಿಶೂರ್ ಮೂಲದ ಕೃಷ್ಣೆಂದು ಹಾಗೂ ಆಕೆಯ ಸಹವರ್ತಿ ಜಿನ್ಸನ್ (27) ಎಂಬುರವನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ.
ಉದ್ಯೋಗ ಕೊಡಿಸುವುದಾಗಿ ಹೇಳಿ 83 ಮಂದಿಯಿಂದ ಬರೋಬ್ಬರಿ 45 ಲಕ್ಷ ರೂಪಾಯಿ ಪಡೆದುಕೊಂಡು ಯಾರೊಬ್ಬರಿಗೂ ಕೆಲಸ ಕೊಡಿಸಿಲ್ಲ.  ಜಿನ್ಸನ್‌ ಜ್ಯುವೆಲ್ಲರಿ ಶಾಪ್ ವೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದು, ಕೃಷ್ಣೆಂದು ಕಂಪನಿಯೊಂದರಲ್ಲಿ ಫ್ಯಾಶನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾಳೆ.
ಫೇಸ್‌ಬುಕ್‌ ಮೂಲಕ  ಉದ್ಯೋಗಾಕಾಂಕ್ಷಿಗಳನ್ನು ಬಲೆಗೆ ಹಾಕಿಕೊಂಡು, ಗಲ್ಫ್ ದೇಶಗಳಲ್ಲಿ ಉತ್ತಮ ಸಂಬಳದ ಉದ್ಯೋಗಗಳ ಆಮಿಷ ತೊರಿಸಿ ಪ್ರತಿಯೊಬ್ಬರಿಂದ 53,000 ರೂಪಾಯಿಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದಳು ಎಂದು  ಪೊಲೀಸರು ತಿಳಿಸಿದ್ದಾರೆ.
ಒಟ್ಟು 83 ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ಅವರಿಗೆ ಕೆಲಸ ಸಿಗದ ವೇಳೆ ತಾವು ಮೋಸ ಹೋದ ಬಗ್ಗೆ ಅರಿವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. 
ಉದ್ಯೋಗದ ನೆಪದಲ್ಲಿ ಆಕೆಗೆ ಕರೆ ಮಾಡಿದ ಪೊಲೀಸರು ನಗದು ಹಣವನ್ನು ಖುದ್ದಾಗಿ ಬಂದು ಸಂಗ್ರಹಿಸುವಂತೆ ಹೇಳಿ ಠಾಣೆಗೆ ಕರೆಸಿಕೊಂಡ ಪೊಲೀಸರು ನಂತರ ಆಕೆಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಈ ರೀತಿ ಮಾಡಿದ್ದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT