ಶಾಲಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಮಹಾರಾಷ್ಟ್ರ ಸಚಿವನ ತಂದೆ: ವಿಡಿಯೋ ವೈರಲ್ 
ದೇಶ

ಶಾಲಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಮಹಾರಾಷ್ಟ್ರ ಸಚಿವನ ತಂದೆ: ವಿಡಿಯೋ ವೈರಲ್

ಮಹಾರಾಷ್ಟ್ರ ಗೃಹ ಖಾತೆ ರಾಜ್ಯ ಸಚಿವ ರಂಜಿತ್ ಪಾಟೀಲ್ ಅವರ ತಂದೆ ವಿ.ಎನ್. ಪಾಟೀಲ್ ಅವರು ಶಾಲಾ ಸಿಬ್ಬಂದಿಗೆ ನಿಂದಿನಿ, ಕಪಾಳಕ್ಕೆ ಹೊಡೆದಿರುವ ವಿಡಿಯೋವೊಂದು ಇದೀಗ ಸಾಮಾಜಿಕ...

ಮುಂಬೈ: ಮಹಾರಾಷ್ಟ್ರ ಗೃಹ ಖಾತೆ ರಾಜ್ಯ ಸಚಿವ ರಂಜಿತ್ ಪಾಟೀಲ್ ಅವರ ತಂದೆ ವಿ.ಎನ್. ಪಾಟೀಲ್ ಅವರು ಶಾಲಾ ಸಿಬ್ಬಂದಿಗೆ ನಿಂದಿನಿ, ಕಪಾಳಕ್ಕೆ ಹೊಡೆದಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
ರಂಜಿತ್ ಪಾಟೀಲ್ ಅವರ ತಂದೆ ವಿ.ಎನ್. ಪಾಟೀಲ್ ಅವರು ಮಾಜಿ ಶಾಸಕರಾಗಿದ್ದು, ತಮ್ಮ ಫೌಂಡೇಷನ್ ಅಡಿಯಲ್ಲಿ ಶಾಲೆಯೊಂದನ್ನು ನಡೆಸುತ್ತಿದ್ದಾರೆ. ಅಕೋಲಾ ಜಿಲ್ಲೆಯ ಮುರ್ತಿಜಾಪುರ್ ನ ತೆಹ್ಸಿಲ್ ನಲ್ಲಿ ಶಾಲೆಯೊಂದಕ್ಕೆ ಭೇಟಿ ನೀಡಿದಾಗ ಅಲ್ಲಿನ ಸಿಬ್ಬಂದಿಯನ್ನು ನಿಂದಿಸಿರುವ ಪಾಟೀಲ್ ಅವರು ಕಪಾಳಕ್ಕೆ ಹೊಡೆದಿದ್ದಾರೆಂದು ತಿಳಿದುಬಂದಿದೆ. ಪ್ರಕಱಣ ಸಂಬಂಧ ಇದೀಗ ಪಾಟೀಲ್ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. 
ತೆಹ್ಸಿಲ್ ನಲ್ಲಿರುವ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ದಾಖಲಾಗುತ್ತಿದ್ದಾರೆ. ಆದರೆ, ನಮ್ಮ ಶಾಲೆಯಲ್ಲಿ ಏಕೆ ಮಕ್ಕಳು ದಾಖಲಾಗುತ್ತಿಲ್ಲ ಎಂದು ತಿಳಿಯುವ ಸಲುವಾಗಿ ಶಾಲೆಗೆ ಪಾಟೀಲ್ ಅವರು ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಭೇಟಿ ವೇಳೆ ಕೆಲ ಶಾಲಾ ಸಿಬ್ಬಂದಿಯೊಬ್ಬರು ತಮ್ಮ ಮೊಬೈಲ್ ಫೋನಿನಲ್ಲಿ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದರು. ಈ ವೇಳೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಪಾಟೀಲ್ ಅವರು ನಿಂದಿಸಿ ಕಪಾಳಕ್ಕೆ ಹೊಡೆದಿದ್ದಾರೆಂದು ತಿಳಿದುಬಂದಿದೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಂಜಿತ್ ಪಾಡಟೀಲ್ ಅವರು, ಸಿಬ್ಬಂದಿಗೆ ನಿಂದಿಸಿರುವುದು, ಹಲ್ಲೆ ಮಾಡಿರುವುದನ್ನು ನನ್ನ ತಂದೆ ನಿರಾಕರಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT