ಸುಪ್ರೀಂಕೋರ್ಟ್ 
ದೇಶ

ಹಾಜಿ ಅಲಿ ದರ್ಗಾ ಒತ್ತುವರಿ: ತೆರವುಗೊಳಿಸಲು 'ಮಹಾ' ಸರ್ಕಾರಕ್ಕೆ 'ಸುಪ್ರೀಂ' ಕೊನೆ ಅವಕಾಶ

ದಕ್ಷಿಣ ಮುಂಬಯಿಯಲ್ಲಿರುವ ಐತಿಹಾಸಿಕ ಹಾಜಿ ಅಲಿ ದರ್ಗಾ ರಸ್ತೆಯನ್ನು ಮಹಾರಾಷ್ಟ್ರ ಸರ್ಕಾರ ಕಾನೂನು ಬಾಹಿರವಾಗಿ ಒತ್ತುವರಿ ಮಾಡಿಕೊಂಡಿದ್ದು...

ನವದೆಹಲಿ: ದಕ್ಷಿಣ ಮುಂಬಯಿಯಲ್ಲಿರುವ ಐತಿಹಾಸಿಕ ಹಾಜಿ ಅಲಿ ದರ್ಗಾ ರಸ್ತೆಯನ್ನು ಮಹಾರಾಷ್ಟ್ರ ಸರ್ಕಾರ ಕಾನೂನು ಬಾಹಿರವಾಗಿ ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿ ತೆರವಿಗೆ ಸುಪ್ರೀಂಕೋರ್ಟ್ ಕೊನೆಯ ಅವಕಾಶ ನೀಡಿದೆ.
ಮಹಾರಾಷ್ಟ್ರ ಸರ್ಕಾರ ಹಾಜಿ ಅಲಿ ದರ್ಗಾದ 908 ಸ್ಕ್ವೇರ್ ಮೀಟರ್ ಜಾಗವನ್ನು ಒತ್ತವರಿ ಮಾಡಿಕೊಂಡಿದ್ದು, ಇಂದಿನಿಂದ ಎರಡು ವಾರಗಳಲ್ಲಿ ತೆರವುಗೊಳಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್, ಮತ್ತು ಡಿ.ವೈ ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ ಆದೇಶಿಸಿದೆ.
ಸಂಬಂಧಪಟ್ಟ ಪ್ರಾಧಿಕಾರವು ಎರಡು ವಾರದೊಳಗೆ ಒತ್ತುವರಿ ತೆರವುಗೊಳಿಸಬೇಕು ಇಲ್ಲದಿದ್ದರೇ, ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ.
ತಾನಾಗಿಯೇ ಒತ್ತುವರಿ ತೆರವು ಮಾಡಲು ಹಾಜಿ ಅಲಿ ದರ್ಗಾ ಟ್ರಸ್ಟ್ ಮುಂದಾಗಿತ್ತು, ಆದರೆ ಆ ಕೆಲಸವನ್ನು ಪೂರ್ಣಗೊಳಿಸಲು ಅಸಮರ್ಥತೆ ತೋರಿದೆ. ಈ ಹಿನ್ನೆಲೆಯಲ್ಲಿ ಜುಲೈ 3ರಿಂದ ಎರಡು ವಾರದೊಳಗೆ ಒತ್ತುವರಿ ತೆರವುಗೊಳಿಸದಿದ್ದರೇ ಗಂಭೀರ ಪರಿಣಾಮ ಎದುರಿಸಬೇಕೆಂದು ಮುಂಬಯಿ ಕೊಲಬಾ ಜೋನ್ ಜಿಲ್ಲಾಧಿಕಾರಿಗೆ ಕೋರ್ಟ್ ಸೂಚಿಸಿದೆ.
ಒತ್ತುವರಿ ತೆರವುಗೊಳಿಸಲು ಹಾಜಿ ಅಲಿ ದರ್ಗಾ ಕೈಗೊಂಡ ಪ್ರಯತ್ನದ ಬಗ್ಗೆ ಮೇ-9 ರಂದು ನ್ಯಾಯಾಲಯ ಶ್ಲಾಘಿಸಿತ್ತು. ಮುಸ್ಲಿಂ ವರ್ತಕ ಸೈಯ್ಯದ್ ಪೀರ್ ಹಾಜಿ ಅಲಿ ಶಾಹ್ ಬುಖಾರಿ ಸ್ಮರಣಾರ್ಥ 1431 ರಲ್ಲಿ ಹಾಜಿ ಅಲಿ ದರ್ಗಾ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT