ಕೋಲ್ಕತಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕರ್ಣನ್ 
ದೇಶ

ಜ.ಕರ್ಣನ್ ಜಾಮೀನು ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನ್ಯಾಯಾಲಯ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕೋಲ್ಕತಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕರ್ಣನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್...

ನವದೆಹಲಿ: ನ್ಯಾಯಾಲಯ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕೋಲ್ಕತಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕರ್ಣನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. 
ನ್ಯಾಯಾಲಯದ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶಿಕ್ಷೆಗೆ ಗುರಿಯಾಗಿ ತಲೆಮರೆಸಿಕೊಂಡಿದ್ದ ಕರ್ಣನ್ ಅವರನ್ನು ಜೂನ್.20 ರಂದು ಕೊಯಮತ್ತೂರಿನಲ್ಲಿ ಬಂಧನಕ್ಕೊಳಪಡಿಸಲಾಗಿತ್ತು. ಪ್ರಸ್ತುತ ಕರ್ಣನ್ ಅವರು ಪಶ್ಚಿಮ ಬಂಗಾಳದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. 
ಬಂಧನಕ್ಕೊಳಗಾದ ಕೆಲವೇ ಗಂಟೆಗಳ ಬಳಿಕ ಅನಾರೋಗ್ಯ ಕಾರಣದಿಂದಾಗಿ ಕರ್ಣನ್ ಅವರು ಎಸ್ಎಸ್'ಕೆಎಂ ಆಸ್ಪತ್ರೆಗೆ ದಾಖಲಾಗಿ, ನಂತರ ಬಿಡುಗಡೆಯಾಗಿದ್ದರು. 
ಪ್ರಕರಣ ಸಂಬಂಧ ಕರ್ಣನ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಕೋರಿ ಕರ್ಣನ್ ಪರ ವಕೀಲ ಮಥ್ಯೂಸ್ ನೆಡುರಪ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲೆ ನಡೆಸಲು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ನಮ್ಮ ಆದೇಶದ ವಿರುದ್ಧ ಯಾವುದೇ ರೀತಿಯ ಮೌಖಿಕ ಮನವಿಯನ್ನು ನಾವು ಸ್ವೀಕರಿಸುವುದಿಲ್ಲ ಎಂದು ಹೇಳಿದೆ. 
ಭಾರತೀಯ ನ್ಯಾಯಾಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿಯ ವಿರುದ್ಧ ಸರ್ವೋಚ್ಛ ನ್ಯಾಯಾಲಯ ನ್ಯಾಯಾಂಗ ನಿಂದನೆಯ ನೋಟೀಸ್ ಜಾರಿ ಮಾಡಿತ್ತು. 
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಅಸ್ತಿತ್ವದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ಕರ್ಣನ್ ಅವರು ಹೊಸ ವಿವಾದ ಸೃಷ್ಟಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರ ನ್ಯಾಯಾಂಗ ಬಂಧನಕ್ಕೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಮೇ 9ರಂದು ಕರ್ಣನ್ ನಾಪತ್ತೆಯಾಗಿದ್ದರು. ಕರ್ಣನ್ ಅವರನ್ನು ಬಂಧಿಸಲು ಪಶ್ಚಿಮ ಬಂಗಾಳದ ಸಿಐಡಿ ಅಧಿಕಾರಿಗಳು ಮುಂದಾಗಿದ್ದರು. ಅಂತಿಮವಾಗಿ ಜೂನ್.20 ರಂದು ಕೊಯಮತ್ತೂರಿನಲ್ಲಿ ಸಿಐಡಿ ಅಧಿಕಾರಿಗಳು ಮತ್ತು ತಮಿಳುನಾಡು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT