ಸಾಂದರ್ಭಿಕ ಚಿತ್ರ 
ದೇಶ

ಉಪ ರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಆಗಸ್ಟ್ 5ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಮಂಗಳವಾರ ....

ನವದೆಹಲಿ: ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಆಗಸ್ಟ್ 5ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು ಇಂದಿನಿಂದಲೇ ನಾಮಪತ್ರ ಸಲ್ಲಿಸಬಹುದಾಗಿದೆ.
 ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಅಧಿಕಾರಾವಧಿ ಆಗಸ್ಟ್ 10ರಂದು ಅಂತ್ಯಗೊಳ್ಳಲಿದ್ದು, ಹೊಸ ಉಪ ರಾಷ್ಟ್ರಪತಿಗಳ ಆಯ್ಕೆಗೆ ಚುನಾವಣಾ ಆಯೋಗ ಆಗಸ್ಟ್ 5ಕ್ಕೆ ಚುನಾವಣೆ ನಿಗದಿಪಡಿಸಿದ್ದು, ಅಂದೇ ಫಲಿತಾಂಶ ಸಹ ಪ್ರಕಟಗೊಳ್ಳಲಿದೆ. 
ಉಪ ರಾಷ್ಟ್ರಪತಿ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಜುಲೈ 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಉಪ ರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್ ಡಿಎ ಆಗಲಿ ಅಥವಾ ಪ್ರತಿಪಕ್ಷವಾಗಲಿ ಇನ್ನೂ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಲೋಕಸಭೆಯಲ್ಲಿ ಬಹುಮತವಿರುವ ಎನ್ ಡಿಎಗೆ ಎಐಎಡಿಎಂಕೆ ಹಾಗೂ ಬಿಜೆಡಿ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದು, ಉಪ ರಾಷ್ಟ್ರಪತಿ ಚುನಾವಣೆಯಲ್ಲೂ ಬೆಂಬಲಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಯಕ್ಷಗಾನ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: KDA ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೊಟ್ಟ ಸ್ಪಷ್ಟನೆಯೇನು?

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

ಉಗ್ರ ಸಂಘಟನೆ ಸೇರಲು ಹೆತ್ತ ಅಮ್ಮ, ಮಲತಂದೆ ಒತ್ತಾಯ: ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ ಮಗ!

ಮತ್ತೆ 'ಭಾರತ-ಪಾಕ್' ಯುದ್ಧ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್; 'ಇದು 60ನೇ ಬಾರಿ': ಕಾಂಗ್ರೆಸ್

Delhi Red Fort blast: ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

SCROLL FOR NEXT