ಉದ್ಧವ್ ಠಾಕ್ರೆ 
ದೇಶ

ಗೋರಕ್ಷಣೆ ಹೆಸರಲ್ಲಿ ಹತ್ಯೆ ಹಿಂದುತ್ವಕ್ಕೆ ವಿರೋಧವಾದದ್ದು: ಶಿವಸೇನಾ

ಗೋರಕ್ಷಣೆ ಹೆಸರಲ್ಲಿ ನಡೆಯುವ ಹತ್ಯೆ ಹಿಂದುತ್ವಕ್ಕೆ ವಿರೋಧವಾದದ್ದು, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಗೋ ನೀತಿ ರೂಪಿಸಬೇಕೆಂದು ಶಿವಸೇನೆ ...

ಮುಂಬಯಿ: ಗೋರಕ್ಷಣೆ ಹೆಸರಲ್ಲಿ ನಡೆಯುವ ಹತ್ಯೆ ಹಿಂದುತ್ವಕ್ಕೆ ವಿರೋಧವಾದದ್ದು, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಗೋ ನೀತಿ ರೂಪಿಸಬೇಕೆಂದು ಶಿವಸೇನೆ ಆಗ್ರಹಿಸಿದೆ.
ಬಿಜೆಪಿ ಆಡಳಿತವಿರುವ ಜಾರ್ಖಂಡ್, ಹರ್ಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂಥಹ ಘಟನೆಗಳು ನಡೆದಿದ್ದು, ಅದನ್ನು ವಿರೋಧಿಸಿ ಪ್ರತಿಭಟನೆಗಳು ಜರುಗಿವೆ, ಗೋಮಾಂಸದ ವಿಷಯವು ಆಹಾರ ಪದ್ಧತಿ, ವ್ಯಾಪಾರ- ವ್ಯವಹಾರ, ಉದ್ಯೋಗಕ್ಕೆ ಸಂಬಂಧಿಸಿದ್ದಾಗಿದೆ, ಹೀಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ರಾಷ್ಟ್ರೀಯ ನೀತಿಯ ಅವಶ್ಯಕತೆಯಿದೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ.
ಹಸುಗಳನ್ನು ರಕ್ಷಿಸುವವರು ನಿನ್ನೆಯವರಗೂ ಹಿಂದೂಗಳಾಗಿದ್ದರು. ಇಂದು ಅವರೆಲ್ಲಾ ಕೊಲೆಗಾರರಾಗುತ್ತಿದ್ದಾರೆ ಎಂದು ಹೇಳಿದೆ.
ಗೋರಕ್ಷಣೆ ಹೆಸರಲ್ಲಿ ನಡೆಯುವ ಕೊಲೆಗಳನ್ನು ಸಹಿಸಲಾಗದು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ  ಕಾನೂನನನ್ನು ಕೈಗೆ ತೆಗೆದುಕೊಳ್ಳುವರವರಿಗೆ ಎಚ್ಚರಿಕೆ ನೀಡಿದ್ದರು. ಪ್ರಕರಣ ಸಂಬಂಧ ಪ್ರಧಾನಿಯವರು ತೆಗೆದುಕೊಂಡ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದರೆ ಗೋಸಂಬಂಧಿತ ರಾಷ್ಟ್ರೀಯ ನೀತಿಯೊಂದನ್ನು ಪ್ರಧಾನಿ ರೂಪಿಸಲೇಬೇಕೆಂದು ಆಗ್ರಹಿಸಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಪತ್ತೆ!

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

SCROLL FOR NEXT