ಫೇಸ್'ಬುಕ್'ನಲ್ಲಿ ಆಕ್ಷೇಪಾರ್ಹ ಹೇಳಿಕೆ: ಪಶ್ಚಿಮ ಬಂಗಾಳದಲ್ಲಿ ಕೋಮು ಸಂಘರ್ಷ 
ದೇಶ

ಫೇಸ್'ಬುಕ್'ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಪಶ್ಚಿಮ ಬಂಗಾಳದಲ್ಲಿ ಕೋಮು ಸಂಘರ್ಷ

ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಪ್ರಕಟಿಸಿದ ಕಾರಣಕ್ಕಾಗಿ ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯಲ್ಲಿ ಕೋಮು ಗಲಭೆಗಳು ಭುಗಿಲೆದ್ದಿವೆ...

ಕೋಲ್ಕತಾ; ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಪ್ರಕಟಿಸಿದ ಕಾರಣಕ್ಕಾಗಿ ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯಲ್ಲಿ ಕೋಮು ಗಲಭೆಗಳು ಭುಗಿಲೆದ್ದಿವೆ. 
ಕೆಲ ದಿನಗಳ ಹಿಂದಷ್ಟೇ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ವೊಂದನ್ನು ಹಾಕಿದ್ದಾನೆ. ಯುವಕ ಹಾಕಿದ್ದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದವು, ಹಲವು ಇದಕ್ಕೆ ವಿರೋಧಗಳನ್ನು ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ಯುವಕನನ್ನು ಬಂಧನಕ್ಕೊಳಪಡಿಸಿದ್ದರು. 
ಇದೀಗ ಬೆಳವಣೆಗೆ ಪಶ್ಚಿಮ ಬಂಗಾಳದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ ಹಲವೆಡೆ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು 400 ಬಿಎಸ್ಎಫ್ ಯೋಧರನ್ನು ನಿಯೋಜಿಸಿದೆ. 
ಈ ನಡುವೆ ರಾಜಕೀಯ ಕೆಸರೆರಚಾಟ ಕೂಡ ಆರಂಭವಾಗಿದ್ದು, 2000ಕ್ಕೂ ಹೆಚ್ಚು ಮುಸ್ಲಿಮರು ಹಿಂದೂಗಳ ಕುಟುಂಬದ ಮೇಲೆ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಆರೋಪಿಸಿದ್ದಾರೆ. ಈ ಮಧ್ಯೆ ಈ ಘಟನೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲರ ನಡುವೆ ವಾಕ್ಸಮರಕ್ಕೂ ನಾಂದಿ ಹಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ