ಮಮತಾ ಬ್ಯಾನರ್ಜಿ 
ದೇಶ

ಮಮತಾ ಭಾವನಾತ್ಮಕವಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ: ಪಶ್ಚಿಮ ಬಂಗಾಳ ರಾಜ್ಯಪಾಲ

ತಮ್ಮ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿದ ಆರೋಪ ಆಧಾರ ರಹಿತ ಎಂದಿರುವ ಪಶ್ಚಿಮ....

ಕೋಲ್ಕತಾ: ತಮ್ಮ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿದ ಆರೋಪ ಆಧಾರ ರಹಿತ ಎಂದಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಕೆ.ಎನ್.ತ್ರಿಪಾಠಿ ಅವರು, ಮಮತಾ ಭಾವನಾತ್ಮಕವಾಗಿ ಜನರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ನಿನ್ನೆ ರಾಜ್ಯಪಾಲರು ತಮಗೆ ಬೆದರಿಕೆ ಹಾಕಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ರಾಜ್ಯಪಾಲರು, ಮುಖ್ಯಮಂತ್ರಿಗಳು ನನ್ನ ವಿರುದ್ಧ ಆಧಾರ ರಹಿತ ಆರೋಪದ ಮಾಡುವ ಬದಲು ತಾವು ಮತ್ತು ತಮ್ಮ ಸಂಪುಟ ಸಹೋದ್ಯೋಗಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಿದರೆ ಒಳ್ಳೆದು ಎಂದು ತಿರುಗೇಟು ನೀಡಿದ್ದಾರೆ.
ರಾಜಭವನ ರಾಜ್ಯ ಸರ್ಕಾರದ ಇಲಾಖೆ ಅಲ್ಲ. ರಾಜ್ಯದ ಪ್ರತಿ ಪ್ರಜೆಯೂ ತನ್ನ ಸಮಸ್ಯೆಯನ್ನು ಹೇಳಿಕೊಳ್ಳಲು ಇಲ್ಲ ಮುಕ್ತ ಅವಕಾಶವಿದೆ ಎಂದು ತ್ರಿಪಾಠಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜಭವನ ಬಿಜೆಪಿ ಅಥವಾ ಆರ್ ಎಸ್ಎಸ್ ಕಚೇರಿಯಾಗುತ್ತಿದೆ ಎಂದು ಹೇಳುವುದು ತಪ್ಪು ಎಂದು ರಾಜ್ಯಪಾಲರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT