ಸೋಮನಾಥ್ ಭಾರ್ತಿ 
ದೇಶ

ಮಹಿಳೆ ಮೇಲೆ ಹಲ್ಲೆ ಆರೋಪ: ಮೂವರು ಎಎಪಿ ಶಾಸಕರ ವಿರುದ್ಧ ಕೇಸ್ ದಾಖಲು

ದೆಹಲಿ ವಿಧಾನಸಭೆ ಆವರಣದಲ್ಲಿ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ.....

ನವದೆಹಲಿ: ದೆಹಲಿ ವಿಧಾನಸಭೆ ಆವರಣದಲ್ಲಿ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಆಮ್ ಆದ್ಮಿ ಪಕ್ಷದ ಮೂವರು ಶಾಸಕರ ವಿರುದ್ಧ ಗುರುವಾರ ಕೇಸ್ ದಾಖಲಿಸಿದ್ದಾರೆ.
ಒಖ್ಲಾ ಎಎಪಿ ಶಾಸಕ ಅಮನತುಲ್ಲಾ ಖಾನ್, ಮಲ್ವಿಯಾ ನಗರ ಶಾಸಕ ಸೋಮನಾಥ್ ಭಾರ್ತಿ ಹಾಗೂ ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ಅವರು ಜೂನ್ 28ರಂದು ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಅಂದು ನಾನು ವಿಧಾನಸಭೆ ಕಲಾಪ ವೀಕ್ಷಿಸಲು ಆಗಮಿಸಿದ್ದೆ. ಆದರೆ ನನಗೆ ಪ್ರೇಕ್ಷಕರ ಗ್ಯಾಲರಿಗೆ ತೆರಳಲು ಪಾಸ್ ಸಿಗಲಿಲ್ಲ. ಹೀಗಾಗಿ ವಿಧಾನಸಭೆ ಹೊರಗಡೆ ನಿಂತಿದ್ದೆ. ಈ ವೇಳೆ ನನ್ನ ಬಳಿಗೆ ಬಂದ ಗುಂಪೊಂದು ಕೋಣೆಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಮಹಿಳೆಯ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು, ಇದೊಂದು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಜಯ್ ಸಿಂಗ್ ಅವರು, ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT