ಸಂಗ್ರಹ ಚಿತ್ರ 
ದೇಶ

ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ: ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸಂಪೂರ್ಣ ಸ್ಥಗಿತ

ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ...

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. 
ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕನ ನಡೆಸಿದ್ದರು. 
ಉನ್ನತಮಟ್ಟದ ಸಭೆ ನಡೆಸಿದ್ದ ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಭದ್ರತೆ ಕುರಿತಂತೆ ಸೂಚನೆಗಳನ್ನು ನೀಡಿದ್ದರು. ಇದರಂತೆ ವದಂತಿಗಳು ಹರಡುವುದನ್ನು ತಡೆಯುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಇಂದು ರಾತ್ರಿ 10ಗಂಟೆಯವರೆಗೂ ಮೊಬೈಲ್, ಬ್ರಾಡ್ ಬ್ಯಾಂಡ್ ಸೇರಿದಂತೆ ಎಲ್ಲಾ ರೀತಿಂದ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. 
ಅನಂತ್ ನಾಗ್ ಜಿಲ್ಲೆಯಲ್ಲಿ 2016ರ ಜುಲೈ 8ರಂದು ನಡೆಸಲಾಗಿದ್ದ ಎನ್ ಕೌಂಟರ್ ನಲ್ಲಿ ಉಗ್ರ ಬುರ್ಹಾನ್ ವಾನಿಯನ್ನು ಹೊಡೆದುರುಳಿಸಲಾಗಿತ್ತು. ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ಉಲ್ಬಣಗೊಂಡಿತ್ತು. ನಿಂತರ ಹಿಂಸಾಚಾರ, ಕಲ್ಲು ತೂರಾಟ, ಗೋಲಿಬಾರ್ ನಿಂದಾಗಿ ಕಾಶ್ಮೀರ ತತ್ತರಿಸಿ ಹೋಗಿತ್ತು. 53 ದಿನಗಳ ಬಳಿತ ಕಾಶ್ಮೀರದಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ತೆರವುಗೊಳಿಸಲಾಗಿತ್ತು. ಇದರಂತೆ ನಾಳೆ ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆಯನ್ನು ನಡೆಸಲು ಕಾಶ್ಮೀರದಲ್ಲಿ ಸಿದ್ಧತೆಗಳು ನಡೆದಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

POCSO case: ಲುಕ್ ಔಟ್ ನೋಟಿಸ್ ಬೆನ್ನಲ್ಲೇ ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ!

SCROLL FOR NEXT