ಸಾಂದರ್ಭಿಕ ಚಿತ್ರ 
ದೇಶ

ಐಐಟಿಗಳಲ್ಲಿ ಕೌನ್ಸೆಲಿಂಗ್ ಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ

ಈ ವರ್ಷ ಜಂಟಿ ಪ್ರವೇಶ ಪರೀಕ್ಷೆ ನಂತರ ಮುಂದಿನ ಆದೇಶ ಬರುವವರೆಗೆ ಕೌನ್ಸೆಲಿಂಗ್ ನಡೆಸದಂತೆ...

ನವದೆಹಲಿ: ಈ ವರ್ಷ ಜಂಟಿ ಪ್ರವೇಶ ಪರೀಕ್ಷೆ ನಂತರ ಮುಂದಿನ ಆದೇಶ ಬರುವವರೆಗೆ ಕೌನ್ಸೆಲಿಂಗ್ ನಡೆಸದಂತೆ ಅಥವಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡದಂತೆ ದೇಶಾದ್ಯಂತ ಭಾರತೀಯ ತಾಂತ್ರಿಕ ಸಂಸ್ಥೆಗೆ ಸುಪ್ರೀಂ ಕೋರ್ಟ್ ಇಂದು ತಡೆಹಿಡಿದಿದೆ.
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಎ.ಎಮ್.ಖನ್ವಿಲ್ಕರ್ ಅವರನ್ನೊಳಗೊಂಡ ನ್ಯಾಯಪೀಠ, ಇಂದಿನಿಂದ ಐಐಟಿಗಳಲ್ಲಿ ಕೌನ್ಸೆಲಿಂಗ್ ಮತ್ತು ಪ್ರವೇಶಕ್ಕೆ ಸಂಬಂಧಪಟ್ಟಂತೆ ಯಾವುದೇ ರಿಟ್ ಅರ್ಜಿಗಳನ್ನು ಸ್ವೀಕರಿಸದಂತೆ ಕೂಡ ಹೈಕೋರ್ಟ್ ಗಳಿಗೆ ತಡೆಯೊಡ್ಡಿದೆ.
ಹೈಕೋರ್ಟ್ ಗಳಲ್ಲಿ ಬಾಕಿ ಉಳಿದಿರುವ ಅರ್ಜಿಗಳ ವಿವರ, ಐಐಟಿ-ಜಂಟಿ ಪ್ರವೇಶ ಪರೀಕ್ಷೆ 2017ರ ರ್ಯಾಂಕ್ ಪಟ್ಟಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಖ್ಯೆಗಳ ವಿವರಗಳನ್ನು ಮತ್ತು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ನೀಡಲಾದ ಹೆಚ್ಚುವರಿ ಅಂಕಗಳ ವಿವರಗಳನ್ನು ಕೂಡ ನ್ಯಾಯಾಲಯ ಕೋರಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಜುಲೈ 10ಕ್ಕೆ ನಿಗದಿಪಡಿಸಿದೆ.
ಐಐಟಿ-ಜೆಇಇ 2017 ರ್ಯಾಂಕ್ ಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಪಟ್ಟಂತೆ ಕಳೆದ ತಿಂಗಳು 30ರಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿತ್ತು.
ಜೆಇಇ 2017ನೇ ಸಾಲಿನ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಬೋನಸ್ ಅಂಕಗಳನ್ನು ನೀಡುವ ಕ್ರಮ ತಪ್ಪಾಗಿದ್ದು ಇದರಿಂದ ಅಭ್ಯರ್ಥಿಗಳ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಐಐಟಿ ಪ್ರವೇಶ ಕೋರಿದ ಐಶ್ವರ್ಯಾ ಅಗರ್ವಾಲ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಜೆಇಇ ಅಂಕಗಳನ್ನು ಸರಿಪಡಿಸಿದ ನಂತರ ಅಖಿಲ ಭಾರತ ರ್ಯಾಂಕ್ ನ್ನು ತಯಾರಿಸುವಂತೆ ಮತ್ತು ತಪ್ಪಾದ ಪ್ರಶ್ನೆಗಳಿಗೆ ಸರಿ ಉತ್ತರ ನೀಡಲು ಪ್ರಯತ್ನಿಸಿದ ಅಭ್ಯರ್ಥಿಗಳಿಗೆ ಅಂಕಗಳನ್ನು ನೀಡುವಂತೆ ಕೂಡ ನ್ಯಾಯಾಲಯ ಆದೇಶ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT