ಚೀನಾ-ಭಾರತ ಗಡಿ ಪ್ರದೇಶ (ಸಾಂಕೇತಿಕ ಚಿತ್ರ) 
ದೇಶ

ಡೋಕ್ಲಾಮ್ ವಿವಾದ ಬಗೆಹರಿಸಲು ಡ್ರ್ಯಾಗನ್ ನಿಂದ 3 ಷರತ್ತು!

ಗಡಿ ವಿವಾದ ಬಗೆಹರಿಸಲು ಚೀನಾ ಮೂರು ಷರತ್ತು ವಿಧಿಸಿದ್ದು, ಡೋಕ್ಲಾಮ್ ಪ್ರದೇಶದಿಂದ ಭಾರತ ತನ್ನ ಸೇನಾ ಪಡೆಗಳನ್ನು ಬೇಷರತ್ತಾಗಿ ವಾಪಸ್ ಕರೆಸಿಕೊಳ್ಳುವುದು ಒಂದಾಗಿದೆ.

ನವದೆಹಲಿ: ಭಾರತ-ಚೀನಾ ನಡುವೆ ಉಂಟಾಗಿರುವ ಡೋಕ್ಲಾಮ್ ಗಡಿ ವಿವಾದ ಬಗೆಹರಿಸಲು ಚೀನಾ ಮೂರು ಷರತ್ತು ವಿಧಿಸಿದ್ದು, ಡೋಕ್ಲಾಮ್ ಪ್ರದೇಶದಿಂದ ಭಾರತ ತನ್ನ ಸೇನಾ ಪಡೆಗಳನ್ನು ಬೇಷರತ್ತಾಗಿ ವಾಪಸ್ ಕರೆಸಿಕೊಳ್ಳುವುದು ಒಂದಾಗಿದೆ. 
ಚೀನಾದ ರಾಜತಾಂತ್ರಿಕ ಅಧಿಕಾರಿ ಚೀನಾದ ಮೂರು ಷರತ್ತುಗಳನ್ನು ಮಾಧ್ಯಮಗಳೆದುರು ಹೇಳಿದ್ದು, ಗಡಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣವನ್ನು ಸರಿಪಡಿಸುವುದು ಭಾರತದ ಕೈಯಲ್ಲಿದೆ. ಚೆಂಡು ಭಾರತದ ಅಂಗಳದಲ್ಲಿದ್ದು, ಶಾಂತಿಯುತವಾಗಿ ಮಾತ್ರ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ. 
ಗಡಿಯಲ್ಲಿ ಉಂಟಾಗಿರುವ ವಿವಾದವನ್ನು ಯಾವ ವಿಧಾನದಲ್ಲಿ ಬಗೆಹರಿಸಿಕೊಳ್ಳಬೇಕು ಎಂಬುದನ್ನು ನಿರ್ಧರಿಸಬೇಕಿರುವುದು ಭಾರತ ಎಂದು ಚೀನಾ ರಾಯಭಾರಿ ಕಚೇರಿ ಅಧಿಕಾರಿ ಲಿ ಫಾನ್ ಹೇಳಿದ್ದಾರೆ. 
ಗಡಿ ವಿವಾದ ಬಗೆಹರಿಸಿಕೊಳ್ಳಲು ಚೀನಾದ ರಾಯಭಾರಿ ಅಧಿಕಾರಿ ಮೂರು ಷರತ್ತುಗಳನ್ನು ಮುಂದಿಟ್ಟಿದ್ದು, ಅವು ಇಂತಿವೆ
  1. ಡೋಕ್ಲಾಮ್ ಪ್ರದೇಶದಿಂದ ಭಾರತ ತನ್ನ ಸೇನಾ ಪಡೆಗಳನ್ನು ಬೇಷರತ್ತಾಗಿ ವಾಪಸ್ ಕರೆಸಿಕೊಳ್ಳಬೇಕು. 
  2.  ಶಾಂತಿಯುತವಾಗಿ ವಿವಾದ ಬಗೆಹರಿಸಿಕೊಳ್ಳುವುದು 
  3.  ಗಡಿ ಪ್ರದೇಶದಲ್ಲಿ ಶಾಂತಿಯನ್ನು ಪುನರ್ಸ್ಥಾಪಿಸಬೇಕು. 
ಇವಿಷ್ಟು ಚೀನಾ ಡೋಕ್ಲಾಮ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ವಿವಾದವನ್ನು ಬಗೆಹರಿಸಿಕೊಳ್ಳಲು ವಿಧಿಸಿರುವ ಷರತ್ತುಗಳಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT