ರಾಮನಾಥ್, ಕೊವಿಂದ್, ಮೀರಾ ಕುಮಾರ್ 
ದೇಶ

ನನ್ನ ಹೋರಾಟ ಬಿಜೆಪಿ ಸಿದ್ಧಾಂತದ ವಿರುದ್ಧವೇ ಹೊರತು ಕೊವಿಂದ್ ವಿರುದ್ಧವಲ್ಲ: ಮೀರಾ ಕುಮಾರ್

ನನ್ನ ಹೋರಾಟ ಭಾರತೀಯ ಜನತಾಪಕ್ಷ(ಬಿಜೆಪಿ)ದ ಸಿದ್ಧಾಂತದ ವಿರುದ್ಧವೇ ಹೊರತು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೊವಿಂದ್ ವಿರುದ್ಧ ಅಲ್ಲ ಎಂದು...

ಚಂಡಿಘಡ್: ನನ್ನ ಹೋರಾಟ ಭಾರತೀಯ ಜನತಾಪಕ್ಷ(ಬಿಜೆಪಿ)ದ ಸಿದ್ಧಾಂತದ ವಿರುದ್ಧವೇ ಹೊರತು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೊವಿಂದ್ ವಿರುದ್ಧ ಅಲ್ಲ ಎಂದು ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮೀರಾ ಕುಮಾರ್ ಹೇಳಿದ್ದಾರೆ. 
ರಾಮನಾಥ್ ಕೊವಿಂದ್ ಅವರ ಬಗ್ಗೆ ನನಗೆ ಗೌರವವಿದೆ. ನನ್ನ ಹೋರಾಟ ಬಿಜೆಪಿ ಸಿದ್ಧಾಂತದ ವಿರುದ್ಧವೇ ಹೊರತು ಕೊವಿಂದ್ ಅವರ ವಿರುದ್ಧ ಅಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. 
ರಾಷ್ಟ್ರಪತಿ ಚುನಾವಣೆಗೆ ಇಬ್ಬರು ದಲಿತರು ನಿಂತಿರುವುದರಿಂದ ಆಧುನಿಕ ಭಾರತದಲ್ಲಿ ಜಾತಿಯ ಬಗ್ಗೆ ಮಾತ್ರ ಮಾತನಾಡಲಾಗುತ್ತಿದ್ದು ಇದು ನನ್ನ ಮನಸ್ಸಿಗೆ ತೀವ್ರ ನೋವನ್ನು ಉಂಟು ಮಾಡಿದೆ ಎಂದು ಮೀರಾ ಕುಮಾರ್ ಹೇಳಿದ್ದಾರೆ. 
ಈ ಹಿಂದಿನ ಚುನಾವಣೆಯಲ್ಲಿ ಬೇರೆ ಜಾತಿಯ ವ್ಯಕ್ತಿಗಳು ನಿಂತಿದ್ದಾಗ ಅಂದು ಯಾರು ಜಾತಿಯ ಬಗ್ಗೆ ಮಾತನಾಡಿರಲಿಲ್ಲ ಆಗ ಅವರ ಗುಣಗಳು, ಪ್ರತಿಭೆ, ಸಾಧನೆಗಳು ಬಗ್ಗೆ ಮಾತ್ರ ಮಾತನಾಡುತ್ತಿದ್ದರು. ಆದರೆ ಇದೀಗ ದಲಿತರಿಬ್ಬರು ರಾಷ್ಟ್ರಪತಿ ಚುನಾವಣೆಗೆ ನಿಂತಿರುವುದು ಜಾತಿ ರಾಜಕಾರಣಕ್ಕೆ ಕಾರಣವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT