ರಾಮನಾಥ್, ಕೊವಿಂದ್, ಮೀರಾ ಕುಮಾರ್ 
ದೇಶ

ನನ್ನ ಹೋರಾಟ ಬಿಜೆಪಿ ಸಿದ್ಧಾಂತದ ವಿರುದ್ಧವೇ ಹೊರತು ಕೊವಿಂದ್ ವಿರುದ್ಧವಲ್ಲ: ಮೀರಾ ಕುಮಾರ್

ನನ್ನ ಹೋರಾಟ ಭಾರತೀಯ ಜನತಾಪಕ್ಷ(ಬಿಜೆಪಿ)ದ ಸಿದ್ಧಾಂತದ ವಿರುದ್ಧವೇ ಹೊರತು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೊವಿಂದ್ ವಿರುದ್ಧ ಅಲ್ಲ ಎಂದು...

ಚಂಡಿಘಡ್: ನನ್ನ ಹೋರಾಟ ಭಾರತೀಯ ಜನತಾಪಕ್ಷ(ಬಿಜೆಪಿ)ದ ಸಿದ್ಧಾಂತದ ವಿರುದ್ಧವೇ ಹೊರತು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೊವಿಂದ್ ವಿರುದ್ಧ ಅಲ್ಲ ಎಂದು ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮೀರಾ ಕುಮಾರ್ ಹೇಳಿದ್ದಾರೆ. 
ರಾಮನಾಥ್ ಕೊವಿಂದ್ ಅವರ ಬಗ್ಗೆ ನನಗೆ ಗೌರವವಿದೆ. ನನ್ನ ಹೋರಾಟ ಬಿಜೆಪಿ ಸಿದ್ಧಾಂತದ ವಿರುದ್ಧವೇ ಹೊರತು ಕೊವಿಂದ್ ಅವರ ವಿರುದ್ಧ ಅಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. 
ರಾಷ್ಟ್ರಪತಿ ಚುನಾವಣೆಗೆ ಇಬ್ಬರು ದಲಿತರು ನಿಂತಿರುವುದರಿಂದ ಆಧುನಿಕ ಭಾರತದಲ್ಲಿ ಜಾತಿಯ ಬಗ್ಗೆ ಮಾತ್ರ ಮಾತನಾಡಲಾಗುತ್ತಿದ್ದು ಇದು ನನ್ನ ಮನಸ್ಸಿಗೆ ತೀವ್ರ ನೋವನ್ನು ಉಂಟು ಮಾಡಿದೆ ಎಂದು ಮೀರಾ ಕುಮಾರ್ ಹೇಳಿದ್ದಾರೆ. 
ಈ ಹಿಂದಿನ ಚುನಾವಣೆಯಲ್ಲಿ ಬೇರೆ ಜಾತಿಯ ವ್ಯಕ್ತಿಗಳು ನಿಂತಿದ್ದಾಗ ಅಂದು ಯಾರು ಜಾತಿಯ ಬಗ್ಗೆ ಮಾತನಾಡಿರಲಿಲ್ಲ ಆಗ ಅವರ ಗುಣಗಳು, ಪ್ರತಿಭೆ, ಸಾಧನೆಗಳು ಬಗ್ಗೆ ಮಾತ್ರ ಮಾತನಾಡುತ್ತಿದ್ದರು. ಆದರೆ ಇದೀಗ ದಲಿತರಿಬ್ಬರು ರಾಷ್ಟ್ರಪತಿ ಚುನಾವಣೆಗೆ ನಿಂತಿರುವುದು ಜಾತಿ ರಾಜಕಾರಣಕ್ಕೆ ಕಾರಣವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT