ಬಿಜೆಪಿ ಶಾಸಕ ಹೆಚ್. ರಾಜಾ ಸಿಂಗ್ 
ದೇಶ

ಪಶ್ಚಿಮ ಬಂಗಾಳ ಕೋಮು ಗಲಭೆ: ಗುಜರಾತ್ ರೀತಿ ಹಿಂಸಾಚಾರಕ್ಕೆ ಬಿಜೆಪಿ ಶಾಸಕ ಕರೆ

ಕೋಮು ಗಲಭೆಯಿಂದಾಗಿ ಈಗಾಗಲೇ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದ್ದು, ಇದರ ನಡುವೆಯೇ 2002 ಗುಜರಾತ್ ರಾಜ್ಯಲ್ಲಿ ಪ್ರತಿಕ್ರಿಯಿಸಿದಂತೆ ಪಶ್ಚಿಮ ಬಂಗಾಳದಲ್ಲೂ ಪ್ರತಿಕ್ರಿಯೆ ನೀಡುವಂತೆ ಬಿಜೆಪಿ ಶಾಸರೊಬ್ಬರೊಬ್ಬರು ಕರೆ ನೀಡಿದ್ದಾರೆ...

ನವದೆಹಲಿ: ಕೋಮು ಗಲಭೆಯಿಂದಾಗಿ ಈಗಾಗಲೇ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದ್ದು, ಇದರ ನಡುವೆಯೇ 2002 ಗುಜರಾತ್ ರಾಜ್ಯಲ್ಲಿ ಪ್ರತಿಕ್ರಿಯಿಸಿದಂತೆ ಪಶ್ಚಿಮ ಬಂಗಾಳದಲ್ಲೂ ಪ್ರತಿಕ್ರಿಯೆ ನೀಡುವಂತೆ ಬಿಜೆಪಿ ಶಾಸರೊಬ್ಬರೊಬ್ಬರು ಕರೆ ನೀಡಿದ್ದಾರೆ. 
ಬದುರಿಯಾ ಮತ್ತು ಬಸೀರ್ಹತ್ ಜಿಲ್ಲೆಗಳಲ್ಲಿ ಕೋಮು ಉದ್ವಿಗ್ನತೆ ತೀವ್ರಗೊಂಡಿರುವ ನಡುವೆ, ಹಿಂದೂ ಸಮುದಾಯ ಹೆಚ್ಚು ಪ್ರಬಲವಾಗಿ ಪ್ರತಿಕ್ರಿಯಿಸಬೇಕು ಎಂದು ಬಿಜೆಪಿ ಶಾಸಕ ಹೆಚ್. ರಾಜಾ ಸಿಂಗ್ ಬಹಿರಂಗವಾಗಿಯೇ ಪ್ರತಿಪಾದಿಸುತ್ತಿರುವುದು ಕಂಡು ಬಂದಿದೆ. 
2002ರಲ್ಲಿ ಗುಜರಾತ್ ನಲ್ಲಿ ಪ್ರತಿಕ್ರಿಯಿಸಿದಂತೆ ಹಿಂದೂ ಸಮುದಾಯ ಪ್ರತಿರೋಧ ಪ್ರದರ್ಶಿಸಬೇಕೆಂದು ಹೈದರಾಬಾದ್ ನ ಬಿಜೆಪಿ ಶಾಸಕ ಎಚ್.ರಾಜಾ ಕರೆ ನೀಡಿದ್ದಾರೆ.
ಈ ಕುರಿತು ವಿಡಿಯೋ ಸಂದೇಶ ಪ್ರಕಟಿಸಿರುವ ರಾಜಾ, ಬಂಗಾಳದ ಹುಲಿಗಳು ಎಚ್ಚರಗೊಳ್ಳಬೇಕು ಮತ್ತು ತಮ್ಮ ಸಮುದಾಯದ ರಕ್ಷಣೆಗೆ ಒಂದಾಗಬೇಕು ಎಂದು ಹೇಳಿದ್ದಾರೆ. 
ಮತ್ತೊಂಡೆಯಲ್ಲಿ ಬಿಜೆಪಿ ವಕ್ತಾರ ನೂಪುರ್ ಶರ್ಮಾ, 2002ರ ಗುಜರಾತ್ ಗಲಭೆಯ ಫೋಟೋ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿ, ಪಶ್ಚಿಮ ಬಂಗಾಳದಲ್ಲಿನ ಹಿಂಸಾಚಾರದ ವಿರುದ್ಧ ಜಂತರ್ ಮಂತರ್ ನಲ್ಲಿ ತಮ್ಮ ಪ್ರತಿಭಟನೆಯಲ್ಲಿ ಕೈಜೋಡಿಸುವಂತೆ ಕರೆ ನೀಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT