ಪ್ರವೀಣ್ ತೊಗಾಡಿಯಾ 
ದೇಶ

ಅಮರನಾಥ ಯಾತ್ರಿಗಳ ಮೇಲೆ ಉಗ್ರ ದಾಳಿ: ಮುಫ್ತಿ ಸರ್ಕಾರ ವಜಾಕ್ಕೆ ಪ್ರವೀಣ್ ತೊಗಾಡಿಯಾ ಆಗ್ರಹ

ಅಮರನಾಥ ಯಾತ್ರಿಗಳ ಮೇಲೆ ಉಗ್ರರ ದಾಳಿಯನ್ನು ತಪ್ಪಿಸಲು ವಿಫಲವಾಗಿರುವ ಜಮ್ಮು-ಕಾಶ್ಮೀರದ ಮೆಹಮೂಬಾ ಮುಫ್ತಿ ನೇತೃತ್ವದ ಸರ್ಕಾರವನ್ನು ವಜಾಗೊಳಿಸಬೇಕೆಂದು ಪ್ರವೀಣ್ ತೊಗಾಡಿಯಾ...

ನವದೆಹಲಿ: ಅಮರನಾಥ ಯಾತ್ರಿಗಳ ಮೇಲೆ ಉಗ್ರರ ದಾಳಿಯನ್ನು ತಪ್ಪಿಸಲು ವಿಫಲವಾಗಿರುವ ಜಮ್ಮು-ಕಾಶ್ಮೀರದ ಮೆಹಮೂಬಾ ಮುಫ್ತಿ ನೇತೃತ್ವದ ಸರ್ಕಾರವನ್ನು ವಜಾಗೊಳಿಸಬೇಕೆಂದು ವಿಶ್ವ ಹಿಂದು ಪರಿಷತ್ (ವಿಹೆಚ್ ಪಿ) ಯ ನಾಯಕ ಪ್ರವೀಣ್ ತೊಗಾಡಿಯಾ ಆಗ್ರಹಿಸಿದ್ದಾರೆ. 
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಪ್ರವೀಣ್ ತೊಗಾಡಿಯಾ, ಮೆಹಬೂಬಾ ಮುಫ್ತಿ ಸರ್ಕಾರವನ್ನು ವಜಾಗೊಳಿಸಿ ಸೇನಾ ಆಡಳಿತವನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಉಗ್ರವಾದಿಗಳ ದಾಳಿಯನ್ನು ಉಗ್ರವಾಗಿ ಖಂಡಿಸುತ್ತೇವೆ, ಸರ್ಕಾರ ಹಿಂದೂಗಳಿಗೆ ಭದ್ರತೆಯೊದಗಿಸುವಲ್ಲಿ ವಿಫಲವಾಗಿದ್ದು, ತಕ್ಷಣವೇ ಸರ್ಕಾರವನ್ನು ವಜಾಗೊಳಿಸಬೇಕೆಂದು ತೊಗಾಡಿಯಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 
ಇದೇ ವೇಳೆ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವುದಕ್ಕೆ ಸ್ಥಳೀಯರನ್ನು ದೂಷಿಸಿರುವ ಪ್ರವೀಣ್ ತೊಗಾಡಿಯಾ, ಕಾಶ್ಮೀರದ ಸ್ಥಳಿಯರನ್ನು ಪಾಕಿಸ್ತಾನದ ಏಜೆಂಟ್ ಗಳಾಗಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನ ಮಾಡಲು ಪಿಡಿಪಿ ವಿಫಲವಾಗಿರುವುದರ ನಡುವೆಯೂ ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮುಂದುವರೆಯುವುದನ್ನು ತೊಗಾಡಿಯಾ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT