ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿಯನ್ನು ಘೋಷಿಸಿದ್ದು, ಮಹಾತ್ಮ ಗಾಂಧೀಜಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತತ್ವದಲ್ಲಿ ನಡೆದ ಸಭೆಯಲ್ಲಿ ಗೋಪಾಲ ಕೃಷ್ಣ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಗೋಪಾಲ ಕೃಷ್ಣ ಗಾಂಧಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯ ಪಾಲರಾಗಿದ್ದಾರೆ. 18 ವಿಪಕ್ಷಗಳು ಸೋನಿಯಾ ನೇತತ್ವದಲ್ಲಿ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿವೆ.
ಜೆಡಿಯು ನಿಂದ ಶರದ್ ಯಾದವ್, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನನೋಹನ್ ಸಿಂಗ್, ಟಿಎಂಸಿಯ ಡೆರೆಕ್ ಓ ಬ್ರೈನ್ಸ ಸಿಪಿಐ(ಎಂ)ನ ಸೀತಾರಾಮ್ ಯೆಚೂರಿ ಸೇರಿದಂತೆ ಹಲವರು ಭಾಗವಹಿಸಿದ್ದರು.