ದೇಶ

ಉಗ್ರರ ದಾಳಿ ನಂತರ ಇಂದು ಅಮರನಾಥಕ್ಕೆ ಹೊರಟ ಯಾತ್ರಿಕರ ಹೊಸ ತಂಡ

ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಏಳು ಮಂದಿ ಅಮರನಾಥ ಯಾತ್ರಿಕರನ್ನು ಉಗ್ರಗಾಮಿಗಳು ಕೊಂದ ನಂತರ ಇಂದು ಬೆಳಗ್ಗೆ ಯಾತ್ರಿಕರ....

ಜಮ್ಮು(ಜಮ್ಮು ಮತ್ತು ಕಾಶ್ಮೀರ): ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಏಳು ಮಂದಿ ಅಮರನಾಥ ಯಾತ್ರಿಕರನ್ನು ಉಗ್ರಗಾಮಿಗಳು ಕೊಂದ ನಂತರ ಇಂದು ಬೆಳಗ್ಗೆ ಯಾತ್ರಿಕರ ಹೊಸ ತಂಡ ಅಮರನಾಥ ದರ್ಶನಕ್ಕೆ ತೆರಳಿದೆ.
ಅಮರನಾಥ ಯಾತ್ರಿಕರ ಮೇಲಿನ ಭಯೋತ್ಪಾದಕ ದಾಳಿಯ ತನಿಖೆ ನಡೆಸುವುದಾಗಿ ಮತ್ತು ಇನ್ನು ಮುಂದಿನ ಯಾತ್ರೆ ಶಾಂತಿಯುತವಾಗಿ ನಡೆಸುವ ಭರವಸೆಯನ್ನು ಸಿಆರ್ ಪಿಎಫ್ ಇನ್ಸ್ ಪೆಕ್ಟರ್ ಜನರಲ್ ಜುಲ್ಫಿಕಾರ್ ಹಸನ್ ಭರವಸೆ ನೀಡಿದ್ದಾರೆ.
ಘಟನೆ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದಕ್ಕೆ ಸ್ವಲ್ಪ ಸಮಯ ಹಿಡಿಯಬಹುದು, ಆದರೆ ನಾವು ಅಪರಾಧಿಗಳನ್ನು ಹಿಡಿಯುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರ ಮೇಲೆ ಉಗ್ರರು ನಡೆಸಿದ ದಾಳಿಯಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT