ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ 
ದೇಶ

ಪ್ರತಿಪಕ್ಷಗಳಿಂದ ಇಂದು ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಣೆ ಸಾಧ್ಯತೆ

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಜು.11 ರಂದು ಎನ್ ಡಿಎ ಪಕ್ಷಗಳ ಹೊರತಾಗಿರುವ ಪಕ್ಷಗಳು ಸಭೆ ನಡೆಸಲಿದ್ದು, ಇಂದೇ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನೂ ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಜು.11 ರಂದು ಎನ್ ಡಿಎ ಪಕ್ಷಗಳ ಹೊರತಾಗಿರುವ ಪಕ್ಷಗಳು ಸಭೆ ನಡೆಸಲಿದ್ದು, ಇಂದೇ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನೂ ಆಯ್ಕೆ ಮಾಡುವ ಸಾಧ್ಯತೆಗಳಿವೆ. 
ಬಿಹಾರದ ಮೈತ್ರಿ ಕೂಟದಲ್ಲಿ ಗುರುತಿಸಿಕೊಂಡಿರುವ ನಿತೀಶ್ ಕುಮಾರ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯಲಿರುವ ಸಭೆಗೆ ಗೈರಾಗಲಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಗೆ ಹಿನ್ನಡೆಯುಂಟಾಗಿದೆ. ಪ್ರತಿಪಕ್ಷಗಳು ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಂಬಂಧ ಸಭೆ ನಡೆಸಿದರೆ ಇತ್ತ ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ಶಾಸಕರ ಸಭೆ ನಡೆಸಲಿದ್ದಾರೆ. ಆದರೆ ಕೆಸಿ ತ್ಯಾಗಿ ಹಾಗೂ ಶರದ್ ಯಾದವ್ ಪ್ರತಿಪಕ್ಷಗಳ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಉಪರಾಷ್ಟ್ರಪತಿ ಹುದ್ದೆಗೆ ದಲಿತ ಮುಖಂಡ ಪ್ರಕಾಶ್ ಅಂಬೇಡ್ಕರ್ ಅವರ ಹೆಸರು ಯುಪಿಎ ಮೈತ್ರಿಕೂಟದಿಂದ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರತಿಪಕ್ಷಗಳ ಮತ್ತೊಂದು ಗುಂಪು ಪಶ್ಚಿಮ ಬಂಗಾಳದ ರಾಜ್ಯಪಾಲ ಗೋಪಾಲ್ ಕೃಷ್ಣ ಗಾಂಧಿ ಅವರ ಹೆಸರನ್ನು ಸೂಚಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

Pak ಫೀಲ್ಡ್ ಮಾರ್ಷಲ್ ಮುನೀರ್​ಗೆ ಜಾಗತಿಕ ಮುಖಭಂಗ; ಮ್ಯೂನಿಚ್ ಭದ್ರತಾ ಸಮ್ಮೇಳನದ ಗೇಟ್‌ನಲ್ಲೇ ತಡೆದ ಸಿಬ್ಬಂದಿ, Video!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

2026ರ ಮೊದಲ ಸೂರ್ಯಗ್ರಹಣ: ಯಾವಾಗ ಮತ್ತು ಎಲ್ಲಿ ವೀಕ್ಷಿಸಬೇಕು? ಇಲ್ಲಿದೆ ವಿವರ

'37,000 ಕೋಟಿ ರೂ. ಬಾಕಿ ಪಾವತಿ ಮಾಡ್ತೀರೋ ಇಲ್ವೋ?': ರಾಜ್ಯ ಸರ್ಕಾರಕ್ಕೆ ಕರ್ನಾಟಕ ಗುತ್ತಿಗೆದಾರ ಪ್ರತಿಭಟನೆ ಎಚ್ಚರಿಕೆ!

SCROLL FOR NEXT