ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ 
ದೇಶ

ಇಸಿಸ್ ಮುಕ್ತ ಮೊಸುಲ್: ನಾಪತ್ತೆಯಾದ 39 ಭಾರತೀಯರ ಪತ್ತೆಗಾಗಿ ಇರಾಕ್'ಗೆ ವಿಕೆ ಸಿಂಗ್ ಭೇಟಿ

ಉಗ್ರರ ಹಿಡಿತದಿಂದ ಮೊಸುಲ್ ಸ್ವತಂತ್ರಗೊಂಡಿದ್ದು, ನಾಪತ್ತೆಯಾಗಿರುವ 39 ಭಾರತೀಯರನ್ನು ರಕ್ಷಣೆ ಮಾಡುವ ಸಲುವಾಗಿ ಭಾರತದ ಉನ್ನತಾಧಿಕಾರಿಗಳ ತಂಡವೊಂದು ಇರಾಕ್'ಗೆ ಭೇಟಿ ನೀಡಲಿದೆ ಎಂದು ಭಾರತ ಸರ್ಕಾರ ಮಂಗಳವಾರ ಹೇಳಿದೆ...

ನವದೆಹಲಿ: ಉಗ್ರರ ಹಿಡಿತದಿಂದ ಮೊಸುಲ್ ಸ್ವತಂತ್ರಗೊಂಡಿದ್ದು, ನಾಪತ್ತೆಯಾಗಿರುವ 39 ಭಾರತೀಯರನ್ನು ರಕ್ಷಣೆ ಮಾಡುವ ಸಲುವಾಗಿ ಭಾರತದ ಉನ್ನತಾಧಿಕಾರಿಗಳ ತಂಡವೊಂದು ಇರಾಕ್'ಗೆ ಭೇಟಿ ನೀಡಲಿದೆ ಎಂದು ಭಾರತ ಸರ್ಕಾರ ಮಂಗಳವಾರ ಹೇಳಿದೆ. 
2014ರಲ್ಲಿ ಇರಾಕ್ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ 39ಕ್ಕೂ ಹೆಚ್ಚು ಭಾರತೀಯರ ಕುರಿತು ಈ ವರೆಗೂ ಯಾವುದೇ ಸುಳಿವುಗಳು ಇನ್ನೂ ಪತ್ತೆಯಾಗಿಲ್ಲ. ನಾಪತ್ತೆಯಾಗಿರುವ ಭಾರತೀಯರ ಪತ್ತೆಗಾಗಿ ಸರ್ಕಾರ ಈಗಾಗಲೇ ಸಾಕಷ್ಟು ಯತ್ನಗಳನ್ನು ನಡೆಸಿದ್ದು. ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. 
ಮೊಸುಲ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ ಉಗ್ರರ ವಿರುದ್ಧ ಜಯ ಸಾಧಿಸಲಾಗಿದೆ. ಇದೀಗ ನಗರವು ಉಗ್ರರ ಹಿಡಿತದಿಂದ ಸ್ವತಂತ್ರಗೊಂಡಿಗೆ ಎಂದು ಇರಾಕ್ ಅಧಿಕೃತವಾಗಿ ಪ್ರಕಟಿಸಿದೆ. ಈ ಹಿನ್ನಲೆಯಲ್ಲಿ ನಾಪತ್ತೆಯಾಗಿರುವ ಭಾರತೀಯ ಪತ್ತೆಗಾಗಿ, ರಕ್ಷಣೆಗಾಗಿ ಉನ್ನತಾಧಿಕಾರಿಗಳನ್ನು ಇರಾಕ್'ಗೆ ಕಳುಹಿಸಲಾಗುತ್ತಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ವಕ್ತಾರರು ಹೇಳಿದ್ದಾರೆ. 
ಭಾರತೀಯರನ್ನು ಪತ್ತೆ ಮಾಡಲು ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ ಅವರು ಕುರ್ದಿಷ್'ಗೆ ಭೇಟಿ ನೀಡುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT