ಸಂಗ್ರಹ ಚಿತ್ರ 
ದೇಶ

1984 ಸಿಖ್ ವಿರೋಧಿ ಗಲಭೆ ಪ್ರಕರಣ: ಸೋಮವಾರದೊಳಗೆ ಕ್ಯಾಪ್ಟನ್ ಭಾಗ್ಮಲ್ ಶರಣಾಗತಿಗೆ ದೆಹಲಿ ಕೋರ್ಟ್ ಸೂಚನೆ!

1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕ್ಯಾಪ್ಟನ್ ಭಾಗ್ಮಲ್ ಅವರು ಜುಲೈ 17 ಸೋಮವಾರದೊಳಗೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗಡುವು ನೀಡಿದೆ.

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕ್ಯಾಪ್ಟನ್ ಭಾಗ್ಮಲ್ ಅವರು ಜುಲೈ 17 ಸೋಮವಾರದೊಳಗೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗಡುವು ನೀಡಿದೆ.

1984 ಸಿಖ್ ವಿರೋಧಿ ಗಲಭೆ ಪ್ರಕರಣದ ದೆಹಲಿ ಕಂಟೋನ್ಮೆಂಟ್ ನ ರಾಜ್ ನಗರ ಪ್ರದೇಶದಲ್ಲಿ ಒಂದೇ ಕುಟುಂಬದ ಐವರ ಸಾವಿನ ಪ್ರಕರಣ ಸಂಬಂಧ ಬಾಗ್ಮಲ್ ಅಪರಾಧಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿದ್ದು, ಇದೇ  ಪ್ರಕರಣ ಸಂಬಂಧ ಸೋಮವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ. ಇದೇ ಪ್ರಕರಣ ಸಂಬಂಧ ಈ ಹಿಂದೆ ಕ್ಯಾಪ್ಟನ್ ಭಾಗ್ಮಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು  ನ್ಯಾಯಾಲಯ ತಿರಸ್ಕರಿಸಿದ್ದು, ನ್ಯಾಯಾಲಯಕ್ಕೆ ಶರಣಾಗಬೇಕಿದೆ.

ಇದೇ ಪ್ರಕರಣದ ಪ್ರಮುಖ ಆರೋಪಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರೊಂದಿಗೆ ಕ್ಯಾಪ್ಟನ್ ಭಾಗ್ಮಲ್ ಕೂಡ ಅಪರಾಧಿಯಾಗಿದ್ದು, ಭಾಗ್ಮಲ್ ಅವರಿಗೆ ನ್ಯಾಯಾಲಯ ಈ ಹಿಂದೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೀಗಾಗಿ  ಭಾಗ್ಮಲ್ ಜೈಲು ಸೇರಿದ್ದರಾದರೂ ತಮ್ಮ ಪತ್ನಿಗೆ ಶಸ್ತ್ರಿ ಚಿಕಿತ್ಸೆ ಮಾಡಿಸಬೇಕು ಎಂದು ಕೋರಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.

ಆಗಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ಖೋಖರ್, ಕ್ಯಾಪ್ಟನ್ ಭಾಗ್ಮಾಲ್, ಗಿರ್ಧರಿ ಲಾಲ್ ಮತ್ತು ಇನ್ನಿತರರು ಒಂದು ಕುಟುಂಬದ ಐದು ಸದಸ್ಯರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ  ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಈ ಐವರ ಪೈಕಿ ಮೂರು ಆರೋಪಿಗಳು 2013 ರ ಮೇ ತಿಂಗಳಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪೈಕಿ ಸಜ್ಜನ್ ಕುಮಾರ್ ಅವರನ್ನು ನ್ಯಾಯಾಲಯ ಬಿಡುಗಡೆ  ಮಾಡಿತ್ತಾದರೂ, ಖೋಖರ್, ಕ್ಯಾಪ್ಟನ್ ಭಾಗ್ಮಾಲ್, ಗಿರ್ಧರಿ ಲಾಲ್ ಅವರಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!