ಸಂಗ್ರಹ ಚಿತ್ರ 
ದೇಶ

ಗೋಮಾಂಸ ಸಾಗಣೆ ಶಂಕೆ: ನಾಗ್ಪುರದಲ್ಲಿ ವ್ಯಕ್ತಿಗೆ ಥಳಿತ, ನಾಲ್ವರ ಬಂಧನ

ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಆರೋಪಿಸಿ 32 ವರ್ಷದ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗುರುವಾರ ನಾಗ್ಪುರದಲ್ಲಿ ನಡೆದಿದೆ.

ನಾಗ್ಪುರ: ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಆರೋಪಿಸಿ 32 ವರ್ಷದ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗುರುವಾರ ನಾಗ್ಪುರದಲ್ಲಿ ನಡೆದಿದೆ.

ನಾಗ್ಪುರದ ಭರ್ಸಿಂಗಿ ಗ್ರಾಮದ ಬುಧವಾರ ಈ ಘಟನೆ ನಡೆದಿದ್ದು, ಥಳಿತಕ್ಕೊಳಗಾದ ವ್ಯಕ್ತಿಯನ್ನು ಸಲೀಂ ಇಸ್ಮಾಯಿಲ್ (32)  ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ಸಲೀಂ ಇಸ್ಮಾಯಿಲ್ ಅಮ್ನೇರ್ ಗ್ರಾಮದಿಂದ  ಕತೋಲ್'ಗೆ ದ್ವಿಚಕ್ರ ವಾಹನದಲ್ಲಿ ಮಾಂಸ ಸಾಗಣೆ ಮಾಡುತ್ತಿದ್ದರು. ಈ ವೇಳೆ ವಾಹನವನ್ನು ಅಡ್ಡಗಟ್ಟಿದ ನಾಲ್ಕು ಮಂದಿ, ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಪ್ರಸ್ತುತ ಗಂಭೀರವಾಗಿ ಗಾಯಗೊಂಡಿರುವ ಸಲೀಂ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಲಾಲ್ಖೆಡಾ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ತಿವಾರಿಯವರು ಹೇಳಿದ್ದಾರೆ. ಪ್ರಕರಣ  ದಾಖಲಿಸಿಕೊಂಡಿರುವ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ಮೊರೇಶ್ವರ್ ತೆಂಡೂಲ್ಕರ್, ಊಯ್ಕೆ, ರಾಮೇಶ್ವರ್ ತಾಯ್ವಾಡೆ ಮತ್ತು ಜಗದೀಶ್ ಚೌಧರಿ ಎಂದು  ಗುರ್ತಿಸಲಾಗಿದೆ. ಬಂಧಿತರೆಲ್ಲರೂ ಸ್ಥಳೀಯ ಆಟೋ ಚಾಲಕರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT