ಮದರಸ ವಿದ್ಯಾರ್ಥಿಗಳು 
ದೇಶ

ಬೆಂಗಳೂರು: ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದ ಮಕ್ಕಳು ಮರಳಿ ಮದರಸಾಗೆ

ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಜು.11 ರಂದು ವಶಕ್ಕೆ ಪಡೆಯಲಾಗಿದ್ದ ಸುಮಾರು 160 ಮದರಸಾ ವಿದ್ಯಾರ್ಥಿಗಳನ್ನು ವಾಪಸ್ ಕಳಿಸಲಾಗಿದೆ.

ಬೆಂಗಳೂರು: ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಜು.11 ರಂದು ವಶಕ್ಕೆ ಪಡೆಯಲಾಗಿದ್ದ ಸುಮಾರು 160 ಮದರಸಾ ವಿದ್ಯಾರ್ಥಿಗಳನ್ನು ವಾಪಸ್ ಕಳಿಸಲಾಗಿದೆ. 
ಗುವಾಹಟಿ ಎಕ್ಸ್ ಪ್ರೆಸ್ ರೈಲಿನಿಂದ ಕಂಟೋನ್ಮೆಂಟ್ ರೈಲು ನಿಲ್ದಾಣ ತಲುಪಿದ್ದ ವಿದ್ಯಾರ್ಥಿಗಳು ಬಾಂಗ್ಲಾದವರಾಗಿದ್ದು, ಅವರನ್ನು ಕೇರಳಕ್ಕೆ ಸಾಗಿಸಲಾಗುತ್ತಿದೆ ಎಂದು ವ್ಯಕ್ತಿಯೊಬ್ಬರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿದ್ದ ಪೊಲೀಸರು ರೈಲಿನಲ್ಲಿ ಬಂದಿದ್ದ 160 ಮದರಸಾ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು. 
ಪರಿಶೀಲನೆ ನಡೆಸಿದ ಬಳಿಕ 160 ವಿದ್ಯಾರ್ಥಿಗಳು ರಂಜಾನ್ ರಜೆಗೆ ತಮ್ಮ ಊರುಗಳಿಗೆ ತೆರಳಿ ವಾಪಸ್ ಕೇರಳದ ಮದರಸಾಗಳಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ವಶಕ್ಕೆ ಪಡೆಯಲಾಗಿದ್ದ ವಿದ್ಯಾರ್ಥಿಗಳನ್ನು ವಾಪಸ್ ಕಳಿಸಲಾಗಿದ್ದು, ಮದರಸಾ ವಿದ್ಯಾರ್ಥಿಗಳ ಗುರುತಿನ ಚೀಟಿ ದಾಖಲೆಯನ್ನು, ಪೋಷಕರ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುವುದಕ್ಕೆ ಕೆಲವು ದಿನಗಳು ಬೇಕಾಗುತ್ತವೆ ಎಂದು ರೈಲ್ವೆ ನಿಲ್ದಾಣದ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

1,322 ಕೋಟಿ ರೂ. ವಂಚನೆ ಪ್ರಕರಣ: Zee ಮಾಲೀಕ ಸುಭಾಷ್ ಚಂದ್ರ ವಿರುದ್ಧ FIR ದಾಖಲಿಸಿದ ಸಿಬಿಐ!

ಹಲ್ಲೆ ಆರೋಪ: ಒಂದು ದಿನದ ಪೊಲೀಸ್ ಕಸ್ಟಡಿಗೆ ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌!

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ