ಕಮಲ್ ಹಾಸನ್ 
ದೇಶ

ಭ್ರಷ್ಟಾಚಾರ ಆರೋಪ ಸಾಬೀತು ಮಾಡಿ: ಕಮಲ್ ಹಾಸನ್ ಗೆ ತಮಿಳುನಾಡು ಸಚಿವ ಸವಾಲು

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ....

ಕೊಯಮತ್ತೂರು: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ತಮಿಳುನಾಡು ಪೌರಾಡಳಿತ ಸಚಿವ ಎಸ್ ಪಿ ವೇಲುಮಣಿ ಅವರು, ಆರೋಪವನ್ನು ಸಾಬೀತುಪಡಿಸುವಂತೆ ನಟನಿಗೆ ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಯಾವುದೇ ಸಾಕ್ಷ್ಯಗಳಿದ್ದರೆ ಅದನ್ನು ಬಹಿರಂಗಪಡಿಸಲಿ ಎಂದು ತಮಿಳುನಾಡು ಸಚಿವರು ಹೇಳಿದ್ದಾರೆ. ಅಲ್ಲದೆ ಕಮಲ್ ಹಾಸನ್ ಅವರು ತಮ್ಮ ಚಿತ್ರಗಳಿಗೆ ತೆರಿಗೆ ಕಟ್ಟಿರುವ ಮಾಹಿತಿ ನೀಡಲು ಸಿದ್ಧರಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಕಮಲ್ ಹಾಸನ್ ಅವರು ಇತ್ತೀಚಿಗಷ್ಟೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೇಲುಮಣಿ ಅವರು, ಕಮಲ್ ಹಾಸನ್ ಅವರು ಈ ಮುಂಚೆ ಈ ರೀತಿಯ ಆರೋಪ ಮಾಡಿಲ್ಲ. ಆದರೆ ಇತ್ತೀಚಿಗೆ ಹಲವು ವಿಚಾರಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡುವ ಮುನ್ನ ಅವರು ಸೂಕ್ತ ಮಾಹಿತಿ ಸಂಗ್ರಹಿಸುವುದು ಸೂಕ್ತ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT