ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ 
ದೇಶ

ಜು.17ರಿಂದ ಸಂಸತ್ ಮುಂಗಾರು ಅಧಿವೇಶನ: ಸರ್ವಪಕ್ಷ ಸಭೆ ಕರೆದ ಸ್ಪೀಕರ್ ಸುಮಿತ್ರಾ ಮಹಾಜನ್

ಜು.17ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು. ಈ ಹಿನ್ನಲೆಯಲ್ಲಿ ಜು.16ರಂದು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸರ್ವಪಕ್ಷ ಸಭೆ ಕರೆದಿದ್ದಾರೆ...

ನವದೆಹಲಿ: ಜು.17ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು. ಈ ಹಿನ್ನಲೆಯಲ್ಲಿ ಜು.16ರಂದು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸರ್ವಪಕ್ಷ ಸಭೆ ಕರೆದಿದ್ದಾರೆ. 
ಸೋಮವಾರದಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು. ಅಧಿವೇಶನಕ್ಕೂ ಮುನ್ನ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಕೋರಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. 
ಜು.17ರಿಂದ ಆರಂಭವಾಗುತ್ತಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆ, ನೋಟು ನಿಷೇಧ ವಿಚಾರ ಸೇರಿದಂತೆ ದೇಶದಲ್ಲಿ ಎದುರಾಗಿರುವ ಇನ್ನಿತರೆ ಸಮಸ್ಯೆಗಳ ಕುರಿತಂತೆ ಸರ್ಕಾರದ ವಿರುದ್ಧ ಟೀಕಾಸ್ತ್ರ ನಡೆಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. 
ಅಧಿವೇಶನದಲ್ಲಿ ಲೋಕಸಭಾ ಸದಸ್ಯರಾಗಿದ್ದ ವಿನೋದ್ ಖನ್ನಾ ಮತ್ತು ರಾಜ್ಯಸಭಾ ಸದಸ್ಯೆ ಪಲ್ಲವಿ ರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮೊದಲ ದಿನದ ಕಲಾಪವನ್ನು ಮುಂದೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT