ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ವಿಧಾನಸಭೆಯಲ್ಲಿ ಸ್ಫೋಟಕ ಪತ್ತೆ: ಎನ್ಐಎ ತನಿಖೆಗೆ ಆದೇಶಿಸುವಂತೆ ಕೇಂದ್ರಕ್ಕೆ ಉ.ಪ್ರದೇಶ ಸರ್ಕಾರ ಮನವಿ

ವಿಧಾನಸಭೆಯಲ್ಲಿ ಸ್ಫೋಟಕ ವಸ್ತು ಪತ್ತೆಯಾದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ತನಿಖೆಗೆ ಆದೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಉತ್ತರಪ್ರದೇಶ ಸರ್ಕಾರ ಶನಿವಾರ ಮನವಿ ಮಾಡಿದೆ...

ಲಖನೌ: ವಿಧಾನಸಭೆಯಲ್ಲಿ ಸ್ಫೋಟಕ ವಸ್ತು ಪತ್ತೆಯಾದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ತನಿಖೆಗೆ ಆದೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಉತ್ತರಪ್ರದೇಶ ಸರ್ಕಾರ ಶನಿವಾರ ಮನವಿ ಮಾಡಿದೆ. 
ನಿನ್ನೆಯಷ್ಟೇ ವಿರೋಧ ಪಕ್ಷದ ಶಾಸಕರೊಬ್ಬರ ಕುರ್ಚಿಯ ಕೆಳಗೆ ಪಿಇಟಿಎನ್ ಸ್ಫೋಟಕ ವಸ್ತು ಪತ್ತೆಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಎನ್ಐಎ ತನಿಖೆ ಮನವಿ ಮಾಡಿಕೊಂಡಿದ್ದರು. 
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು, ಕೇಂದ್ರ ಗೃಹ ಸಚಿವಾಲಯ ಔಪಚಾರಿಕ ಆದೇಶ ನೀಡಿದ ಬಳಿಕವಷ್ಟೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರಕ್ಕೆ ಮನವಿ ಮಾಡಿರುವ ಉತ್ತರಪ್ರದೇಶ ಸರ್ಕಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಮನವಿ ಮಾಡಿಕೊಂಡಿದೆ. 
ಬಿಗಿ ಭದ್ರತೆಯುಳ್ಳ ವಿಧಾನಸಭೆಯೊಳಗೇ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ರಾಜ್ಯದ ಜನತೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಸ್ಫೋಟಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ವಿಧಾನಸಭೆಯ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಿಧಾನಸಭೆಗೆ ಬರುವ ಪ್ರತೀಯೊಬ್ಬರನ್ನೂ ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT